ಬ್ರೇಕಿಂಗ್ ನ್ಯೂಸ್
02-07-24 11:05 pm Mangalore Correspondent ಕರಾವಳಿ
ಮಂಗಳೂರು, ಜುಲೈ.2: ಮಂಗಳೂರು ನಗರವನ್ನು ಹಾದು ಹೋಗುವ ಹೆದ್ದಾರಿಯ ಅಲ್ಲಲ್ಲಿ ಮಳೆಯಿಂದಾಗಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಸಂಚಾರಕ್ಕೆ ನರಕ ಯಾತನೆ ಅನುಭವಿಸುತ್ತಿದ್ದಾರೆ. ನಗರದ ಕೆಪಿಟಿ ವೃತ್ತದಲ್ಲಿ ಎರಡು ದಿನಗಳ ಹಿಂದೆ ಹೆದ್ದಾರಿ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರನೊಬ್ಬ ಗಾಯಗೊಂಡಿದ್ದ. ಇದನ್ನು ನೋಡಿ ಮನ ಕರಗಿದ ಟ್ರಾಫಿಕ್ ಪೊಲೀಸರು ಆ ಗುಂಡಿಗೆ ಸಿಮೆಂಟ್ ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ.
ಕದ್ರಿ ಸಂಚಾರಿ ಠಾಣೆಯ ಇನ್ ಸ್ಪೆಕ್ಟರ್, ಮೈಸೂರು ಮೂಲದ ಈಶ್ವರ್ ಸ್ವಾಮಿ ಸ್ವತಃ ಹಾರೆ ಹಿಡಿದು ಗುಂಡಿಗೆ ಸಿಮೆಂಟ್ ತುಂಬಿಸುವ ಕೆಲಸ ಮಾಡಿದ್ದಾರೆ. ಟ್ರಾಫಿಕ್ ಪೊಲೀಸರ ಈ ಕೆಲಸ ಶ್ಲಾಘನೆಗೆ ಪಾತ್ರವಾಗಿದೆ. ಕೆಪಿಟಿ ವೃತ್ತದ ಬಳಿಯಲ್ಲೇ ಹೆದ್ದಾರಿಯಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದಿತ್ತು. ಹಾಗಿದ್ದರೂ, ಅಲ್ಲಿ ನಿಂತಿದ್ದ ಟ್ರಾಫಿಕ್ ಪೊಲೀಸರು ವಾಹನ ಸವಾರರನ್ನು ನಿಲ್ಲಿಸಿ ಫೈನ್ ಹಾಕುತ್ತಿದ್ದರೇ ವಿನಾ ಗುಂಡಿ ಮುಚ್ಚುವುದಕ್ಕಾಗಲೀ, ಹೆದ್ದಾರಿ ಇಲಾಖೆಗೆ ಹೇಳಿ ಕೆಲಸ ಮಾಡಿಸುವುದಾಗಲೀ ಮಾಡಿರಲಿಲ್ಲ.






ಮೊನ್ನೆ ಸ್ಕೂಟರ್ ಸವಾರನೊಬ್ಬ ಅದೇ ಗುಂಡಿಗೆ ಬಿದ್ದು ಮೈಕೈಗೆ ಗಾಯ ಮಾಡಿಕೊಂಡಿದ್ದ. ಟ್ರಾಫಿಕ್ ಪೊಲೀಸರು ನಿಲ್ಲುವ ಜಾಗದಲ್ಲೇ ಈ ಘಟನೆ ನಡೆದಿತ್ತು. ಇದನ್ನು ನೋಡಿದ್ದ ಟ್ರಾಫಿಕ್ ಇನ್ಸ್ ಪೆಕ್ಟರ್ ಈಶ್ವರ್ ಸ್ವಾಮಿ ಮಂಗಳವಾರ ಎಲ್ಲಿಂದಲೋ ಸಿಮೆಂಟ್ ಮಿಕ್ಸರ್ ತಂದು ಸುರಿದಿದ್ದಾರೆ. ಅಷ್ಟಾದರೂ ಗುಂಡಿ ಮುಚ್ಚಲಿ ಎಂದು ಸಾರ್ವಜನಿಕರ ಸೇವೆ ಮಾಡಿದ್ದಾರೆ. ಪುಣ್ಯಕ್ಕೆ ಸಂಜೆಯ ವರೆಗೆ ಮಳೆ ಬಿಟ್ಟಿದ್ದರಿಂದ ಸಿಮೆಂಟ್ ಸ್ವಲ್ಪ ಗಟ್ಟಿ ಆಗುವಂತೆ ಉಳಿದುಬಿಟ್ಟಿದೆ. ಪಣಂಬೂರು, ಬೈಕಂಪಾಡಿ, ಕುಳೂರು ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದಿದ್ದು, ಹೆದ್ದಾರಿ ಅಧಿಕಾರಿಗಳು ಇದನ್ನು ಮುಚ್ಚುವ ಗೊಡವೆಗೆ ಮುಂದಾಗಿಲ್ಲ.
Mangalore kadri traffic police inspector eshwar Swami and policeman fix potholes at KPT as authorities neglect duty. Eshwar Swamy, who works at the east traffic police station, along with contributions from traffic staff and auto-rickshaw drivers, managed to fix the pothole.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm