ಬ್ರೇಕಿಂಗ್ ನ್ಯೂಸ್
08-07-24 04:39 pm Mangalore Correspondent ಕರಾವಳಿ
ಪುತ್ತೂರು, ಜುಲೈ 8: ಬೆಂಗಳೂರಿನ ವ್ಯಕ್ತಿಯೊಬ್ಬರು ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು ನದಿಯಲ್ಲಿ ಕೊಚ್ಚಿ ಹೋಗಿದ್ದಾತನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಬೆಂಗಳೂರಿನ ಮಾರತಹಳ್ಳಿ ನಿವಾಸಿ ರವಿಕುಮಾರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ತನ್ನ ಕೈಯನ್ನು ಕೊಯ್ದುಕೊಂಡು ಕೋಡಿಂಬಾಳದಲ್ಲಿ ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ರವಿಕುಮಾರ್ ಕೊಚ್ಚಿಕೊಂಡು ಹೋಗಿದ್ದು, ಬಳಿಕ ನದಿಯ ಮಧ್ಯಭಾಗದ ಪೊದೆಯಲ್ಲಿ ಸಿಲುಕಿಕೊಂಡಿದ್ದ. ನದಿಯ ಮಧ್ಯೆ ಸಿಲುಕುತ್ತಿದ್ದಂತೆ ಜೀವ ಭಯ ಕಾಡಿದ್ದು ತನ್ನನ್ನು ರಕ್ಷಣೆ ಮಾಡುವಂತೆ ಅಂಗಲಾಚಿದ್ದಾನೆ. ಕಿರುಚಾಟ ಕೇಳಿಸಿಕೊಂಡ ಸ್ಧಳೀಯರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನದಿ ತುಂಬಿಕೊಂಡು ಹರಿಯುತ್ತಿದ್ದು ಈತನ ಅದೃಷ್ಟದಿಂದ ಪೊದೆಯಲ್ಲಿ ಸಿಲುಕಿ ಬದುಕುಳಿದಿದ್ದಾನೆ.


ಸ್ಥಳಕ್ಕೆ ಆಗಮಿಸಿದ ಪೋಲಿಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಶೌರ್ಯ ತಂಡದ ಸದಸ್ಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ನದಿ ಮಧ್ಯದಲ್ಲಿದ್ದ ವ್ಯಕ್ತಿಯನ್ನು ರಕ್ಷಿಸಿ ಮೇಲಕ್ಕೆ ತಂದಿದ್ದಾರೆ. ನದಿಗೆ ಹಾರಿದ ಸ್ಥಳದಲ್ಲಿ ಆ ವ್ಯಕ್ತಿಯ ಬ್ಯಾಗ್ ಮತ್ತು ಪ್ಯಾಂಟಿನ ಜೇಬಿನಲ್ಲಿ ಹಣ ಪತ್ತೆಯಾಗಿದೆ. ಪೊಲೀಸರು ವ್ಯಕ್ತಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
Fire service personnel rescued a youth who was stuck in the Kumaradhara river and calling for help at Pulikukku on Monday July 8. The Kumaradhara river was flowing at full capacity at Pulikukku. A youth was found crying for help, clinging to the bushes in the river on Monday morning. Locals alerted the police and fire service personnel.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm