ಬ್ರೇಕಿಂಗ್ ನ್ಯೂಸ್
09-07-24 05:30 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರು ಕಾಂಗ್ರೆಸ್ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಪಾಳಕ್ಕೆ ಹೊಡೆಯಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ. ಭರತ್ ಶೆಟ್ಟಿ ಶಾಸಕನಾಗೋದಕ್ಕೆ ನಾಲಾಯಕ್. ಯೋಗ್ಯತೆ ಇಲ್ಲದ ಮನುಷ್ಯ. ತಾಕತ್ತಿದ್ದರೆ ನಮ್ಮ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈಮಾಡಿ ನೋಡಲಿ ಎಂದು ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಶಾಸಕರು ರಾಹುಲ್ ಗಾಂಧಿ ಮಾತನಾಡಿರೋದನ್ನು ಅಪಾರ್ಥ ಮಾಡುತ್ತಿದ್ದಾರೆ. ಹಿಂದುಗಳ ಬಗ್ಗೆ ಯಾವುದೇ ಮಾತು ಆಡಿಲ್ಲ. ಹಿಂದುಗಳು ಯಾರನ್ನೂ ದ್ವೇಷ ಮಾಡಲ್ಲ ಎಂದಿದ್ದಾರೆ. ಆದರೆ ಭರತ್ ಶೆಟ್ಟಿ ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾನೆ. ರಾಹುಲ್ ಗಾಂಧಿ ಅವರಿಗೆ ಕಪಾಳಕ್ಕೆ ಹೊಡಿಬೇಕು ಎಂದು ಹೇಳಿದ್ದಾನೆ.

ಭರತ್ ಶೆಟ್ಟಿ ಶಾಸಕನಾಗೋದಕ್ಕೆ ನಾಲಾಯಕ್. ಅವನು ಯೋಗ್ಯತೆ ಇಲ್ಲದ ಮನುಷ್ಯ. ಅವನು ಮೊದಲು ನಮ್ಮ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈ ಮಾಡಲಿ. ತಾಕತ್ತು ಇದ್ರೆ ಅವ ಗಂಡು ಮಗ ಆಗಿದ್ರೆ ಕಾರ್ಯಕರ್ತನ ಮೇಲೆ ಕೈ ಹಾಕಲಿ. ಆಮೇಲೆ ಜಿಲ್ಲೆಯಲ್ಲಿ ಏನು ಆಗುತ್ತೆ ಎಂದು ನಾನು ನೋಡ್ತೇನೆ.
ಬೆಳ್ತಂಗಡಿ ಶಾಸಕನೊಬ್ಬ ಅಧಿಕಾರಿಗಳ ಮೇಲೆ ಕೈ ಮಾಡಲು ಹೋಗ್ತಾನೆ. ಭರತ್ ಶೆಟ್ಟಿ ವಿರೋಧ ಪಕ್ಷದ ನಾಯಕನಿಗೆ ಕಪಾಳಕ್ಕೆ ಹೊಡಿಬೇಕು ಅಂತಾನೆ. ಅವನ ಮೇಲೆ ಪೊಲೀಸರು ಸುಮೋಟೊ ಕೇಸ್ ಹಾಕಬೇಕು. ರಾಹುಲ್ ಗಾಂಧಿ ಹುಚ್ಚ ಎಂದು ಹೇಳಿದವನನ್ನು ಹಾಗೇ ಬಿಡಬಾರದು. ಇಂತಹ ಮಾತುಗಳನ್ನು ನಾವು ಸಹಿಸಲು ಸಾಧ್ಯವಿಲ್ಲ. ನಾವು ಸಣ್ಣಪುಟ್ಟ ಮಾತನಾಡಿದ್ರೆ ದೊಡ್ಡ ರಂಪಾಟ ಮಾಡುತ್ತಾರೆ. ಇಂಥವರನ್ನು ಹಾಗೆಯೇ ಬಿಡಬಾರದು. ಇವರಿಗೆ ಸಾಮಾನ್ಯ ಜನರನ್ನು ಪ್ರಚೋದಿಸುವುದೇ ಕೆಲಸ ಎಂದು ಕಿಡಿಕಾರಿದರು.
ಮಂಗಳೂರಿನ ಕಾವೂರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಡಾ.ವೈ.ಭರತ್ ಶೆಟ್ಟಿ, ಹಿಂದುಗಳ ವಿರುದ್ಧ ಅವಾಚ್ಯ ಮಾತನಾಡಿರುವ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ. ರಾಹುಲ್ ಗಾಂಧಿ ಒಬ್ಬ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ ಎಂದಿದ್ದರು. ಸಂಸತ್ ನಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದ ವೇಳೆ ಈ ಮಾತು ಆಡಿದ್ದಾರೆ.
Former minister Ramanath Rai criticized MLA Bharath Shetty during a press meet held at the Congress office in Mallikatte on Tuesday, July 9, over his slap remark about leader of opposition in the Lok Sabha, Rahul Gandhi.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm