ಬ್ರೇಕಿಂಗ್ ನ್ಯೂಸ್
09-07-24 07:47 pm Udupi Correspondent ಕರಾವಳಿ
ಉಡುಪಿ, ಜುಲೈ.9: ಟಿ20 ವಿಶ್ವಕಪ್ ಜಯದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನ ವತಿಯಿಂದ ದಂಪತಿಗೆ ವಿಶೇಷ ಸ್ವಾಗತ ಕೋರಲಾಯಿತು.
ಇದೇ ವೇಳೆ, ನೂತನವಾಗಿ ನಿರ್ಮಾಣವಾಗುತ್ತಿರುವ ಕಾಪು ಶ್ರೀ ಹಳೆ ಮಾರಿಗುಡಿ ದೇವಸ್ಥಾನಕ್ಕೆ ಸೂರ್ಯಕುಮಾರ್ ದಂಪತಿ ಭೇಟಿ ನೀಡಿದರು. ದೇವಸ್ಥಾನದ ನಿರ್ಮಾಣ, ಕೆತ್ತನೆ ಶಿಲ್ಪಕಲೆಯ ಬಗ್ಗೆ ಕ್ರಿಕೆಟಿಗ ಮಾಹಿತಿ ಪಡೆದುಕೊಂಡರು. ಇಳಕಲ್ ಶಿಲೆಯಲ್ಲಿ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಗರ್ಭಗುಡಿ, ಉಚ್ಚಂಗಿ ಗುಡಿ, ಸುತ್ತುಪೌಳಿ ಕಾಮಗಾರಿ ಶೇ.90 ಭಾಗ ಪೂರ್ಣವಾಗಿದೆ. ಮುಂದಿನ ಮಾರ್ಚ್ 2 ರಂದು ಬ್ರಹ್ಮಕಲಶ ಮಹೋತ್ಸವಕ್ಕೆ ದಿನ ನಿಗದಿಯಾಗಿದೆ.
![]()

![]()
ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್, ಕಾಪು ಮಾರಿಯಮ್ಮನ ದರ್ಶನ ಮಾಡಿದ ಮೇಲೆ ಮನಸ್ಸಿಗೆ ಬಹಳ ನೆಮ್ಮದಿ ಸಿಕ್ಕಿದೆ. ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯ್ತು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭ ಬರಬೇಕು ಎಂಬ ಇಚ್ಛೆ ಇದೆ. ಆ ಸಂದರ್ಭದಲ್ಲಿ ಅವಕಾಶ ಸಿಕ್ಕರೆ ಖಂಡಿತವಾಗಿ ಬರುತ್ತೇನೆ ಎಂದು ತಿಳಿಸಿದರು.
ಮುಂಬೈನಲ್ಲಿ ವರ್ಲ್ಡ್ ಕಪ್ ಸೆಲೆಬ್ರೇಶನ್ ಜನಸ್ತೋಮ ನೋಡಿ ಬಹಳ ಖುಷಿಯಾಯಿತು. ಕಾಪುವಿನಲ್ಲಿ ಕೂಡ ಜನರು ಪ್ರೀತಿಯಿಂದ ಬರಮಾಡಿಕೊಂಡಿದ್ದು ಮನಸ್ಸಿಗೆ ತಟ್ಟಿದೆ. ದೇವಸ್ಥಾನದಲ್ಲಿ ಇಷ್ಟು ಮಂದಿ ಸೇರುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ ಎಂದು ಖುಷಿ ವ್ಯಕ್ತಪಡಿಸಿದರು.
‘ಕಾಪುದ ಅಮ್ಮ’ (ಕಾಪುವಿನ ತಾಯಿ) ಎಂದು ಪತ್ನಿಯ ಪ್ರಭಾವದಿಂದ ತುಳುವಿನಲ್ಲಿ ಮಾತನಾಡಿದ ಕ್ರಿಕೆಟರ್ ಸೂರ್ಯ ಕುಮಾರ್, ಟೀಮ್ ಇಂಡಿಯಾ ಕಪ್ತಾನನಾಗಿ ಕಾಪುವಿಗೆ ಬನ್ನಿ ಎಂದು ಅರ್ಚಕರು ಪ್ರಾರ್ಥಿಸಿದ್ದಕ್ಕೆ ಪ್ರತಿಕ್ರಿಯಿಸಿ, ತಂಡದ ಕಪ್ತಾನ ಆಗೋದು ನಮ್ಮ ಕೈಯಲ್ಲಿಲ್ಲ. ದೇಶಕ್ಕಾಗಿ ಚೆನ್ನಾಗಿ ಆಡುವುದು ಮಾತ್ರ ನಮ್ಮ ಗುರಿ. ದೇವರು ಇಚ್ಛಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ ಎಂದು ಹೇಳಿದರು.
ಪತ್ನಿ ದೇವಿಶಾ ಮಾತನಾಡಿ, ಕಾಪು ಮಾರಿಗುಡಿಗೆ ಬಂದು ಮನಸ್ಸಿಗೆ ಖುಷಿಯಾಗಿದೆ. ಐದು ವರ್ಷದ ಹಿಂದೆ ನಾವು ಒಮ್ಮೆ ಉಡುಪಿಗೆ ಬಂದಿದ್ದೆವು. ಮತ್ತೊಮ್ಮೆ ಕಾಪು ಅಮ್ಮನಲ್ಲಿಗೆ ಬರಬೇಕು ಎಂಬ ಇಚ್ಛೆ ಇತ್ತು. ಯಾವುದೇ ಟೂರ್ನಿ ಇಲ್ಲದಿದ್ದರೆ ದೇಗುಲ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಬರುತ್ತೇವೆ. ಕಾಪು ಮಾರಿಯಮ್ಮನನ್ನು ನೋಡಲು ಪತಿಯನ್ನೂ ಕರೆದುಕೊಂಡು ಬಂದಿದ್ದೇನೆ. ದೇವಿಯಲ್ಲಿ ಏನು ಪ್ರಾರ್ಥಿಸಿದ್ದೇನೆ ಎಂದು ಹೇಳುವುದಿಲ್ಲ. ದೇವರಿಗೆ ಸೇವೆ ಕೊಡಬೇಕು ಎಂಬ ಸಂಕಲ್ಪ ಇತ್ತು. ದೇವರಿಗೆ ಸಲ್ಲಿಸಿದ ಕಾಣಿಕೆಯನ್ನು ಹೇಳಿಕೊಳ್ಳಲು ಇಷ್ಟವಿಲ್ಲ. ಭಾರತವನ್ನು ಪ್ರತಿನಿಧಿಸಬೇಕು ಮತ್ತು ವರ್ಲ್ಡ್ ಕಪ್ ಗೆಲ್ಲಬೇಕು ಎಂಬುದು ಎಲ್ಲಾ ಕ್ರಿಕೆಟರ್ಗಳ ಕನಸು. ಒಂದು ಕನಸು ಸಾಕಾರಗೊಂಡಿದೆ ಎಂಬ ಖುಷಿ ಇದೆ. ಇಂತಹ ಹಲವಾರು ಕನಸುಗಳನ್ನು ಕಂಡು ಮುಂದೆ ಸಾಗಬೇಕಾಗಿದೆ ಎಂದರು.
While Suryakumar spoke in Hindi, Devisha impressed everyone by speaking in Tulu. Suryakumar mentioned that his life improved significantly after visiting this temple and promised to return next year if he is not on tour.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm