ಬ್ರೇಕಿಂಗ್ ನ್ಯೂಸ್
10-07-24 01:52 pm Mangalore Correspondent ಕರಾವಳಿ
ಮಂಗಳೂರು, ಜುಲೈ.10: ಕಾಂಗ್ರೆಸ್ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯ ಕೆನ್ನೆಗೆ ಹೊಡೆಯಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಬಿಎನ್ಎಸ್ 353 ಮತ್ತಿತರ ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ಕಾವೂರಿನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ಭರತ್ ಶೆಟ್ಟಿ ವಿವಾದಾತ್ಮಕ ಮಾತುಗಳನ್ನಾಡಿದ್ದರು. ರಾಹುಲ್ ಗಾಂಧಿ ಒಬ್ಬ ಹುಚ್ಚನ ರೀತಿ ವರ್ತಿಸುತ್ತಿದ್ದಾರೆ. ಆತನಿಗೆ ಸ್ಥಿಮಿತ ಇಲ್ಲ. ಯಾರಾದ್ರೂ ಸಂಸತ್ತಿನ ಒಳಗಡೆಯೇ ಆತನ ಕಪಾಳಕ್ಕೆ ಹೊಡೆಯಬೇಕು. ಆತ ಈ ಕಡೆ ಬಂದರೆ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ತಾಕತ್ತಿದ್ದರೆ ನಮ್ಮ ಒಬ್ಬ ಕಾರ್ಯಕರ್ತನಿಗೆ ಹೊಡೆದು ನೋಡಲಿ ಎಂದಿದ್ದಲ್ಲದೆ, ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕೆಂದು ಆಗ್ರಹ ಮಾಡಿದ್ದರು.
ಭರತ್ ಶೆಟ್ಟಿ ವಿರುದ್ಧ ಮಹಾನಗರ ಪಾಲಿಕೆಯ ಕಚೇರಿ ಮುಂಭಾಗದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದು, ಭರತ್ ಶೆಟ್ಟಿ ಮುಖವಾಡ ತೊಟ್ಟು ಧಿಕ್ಕಾರ ಕೂಗಿದ್ದಾರೆ.
Mangalore Police book FIR on MLA Bharath Shetty for his remarks on Rahul Gandhi. Karnataka BJP MLA Bharat Shetty on Monday, July 8, stirred a major controversy, saying the Leader of the Opposition (LoP) Rahul Gandhi should be locked up and slapped inside the Parliament for his alleged anti-Hindu remarks.
24-06-25 08:16 pm
HK News Desk
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
24-06-25 07:39 pm
Bangalore Correspondent
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm