ಬ್ರೇಕಿಂಗ್ ನ್ಯೂಸ್
11-07-24 10:30 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಕೊಂಕಣ ರೈಲ್ವೇ ಮತ್ತು ಮಂಗಳೂರು ಪ್ರತ್ಯೇಕ ರೈಲ್ವೇ ವಿಭಾಗ ಬೇಡಿಕೆಯ ಕುರಿತು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ರೈಲು ಯಾತ್ರಿಕರ ಸಮಸ್ಯೆಗಳ ಕುರಿತಾಗಿ ಚರ್ಚಿಸಲು ಮಂಗಳೂರಿನಲ್ಲಿಯೇ ಸಭೆ ಏರ್ಪಡಿಸುವಂತೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರ ಬರೆದಿದ್ದಾರೆ.
ಕೊಂಕಣ ರೈಲು ಮಂಡಳಿಯನ್ನು ಭಾರತೀಯ ರೈಲ್ವೇ ಜೊತೆಗೆ ಸೇರ್ಪಡೆ ಮಾಡುವುದು ಮುಖ್ಯ ಬೇಡಿಕೆ. ಕೊಂಕಣ ರೈಲ್ವೇ ನಿಗಮ ಲಿಮಿಟೆಡ್ (ಕೆಆರ್ಸಿಎಲ್) ಸ್ವತಂತ್ರ ಸಂಸ್ಥೆಯಾಗಿರುವುದರಿಂದ ಎದುರಿಸುತ್ತಿರುವ ಹಣಕಾಸು ಅಡಚಣೆಗಳನ್ನು ನಿವಾರಿಸಲು ವಿಲೀನ ಅವಶ್ಯವಾಗಿದೆ. ಮುಂಬೈ- ಮಂಗಳೂರು ಮಧ್ಯೆ 741 ಕಿಮೀ ಉದ್ದದ ಕೊಂಕಣ ರೈಲ್ವೇ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿದ್ದು, ಭಾರತೀಯ ರೈಲ್ವೇ ವಿಭಾಗದಿಂದ ಪ್ರತ್ಯೇಕವಾಗಿ ಗುರುತಿಸಿಕೊಂಡಿರುವುದರಿಂದ ಅಭಿವೃದ್ಧಿಗೆ ತೊಡಕಾಗಿದೆ. ಇನ್ನಿತರ ರೈಲು ಸಂಪರ್ಕದ ಅಭಿವೃದ್ಧಿಗೂ ಬೇರೆ ವಲಯಗಳನ್ನು ಅವಲಂಬಿಸುವ ಸ್ಥಿತಿಯಿದೆ. ಹೀಗಾಗಿ ಕೊಂಕಣ ರೈಲ್ವೇಯನ್ನು ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸಿದರೆ, ಕರಾವಳಿಯ ರೈಲ್ವೇ ವಲಯ ಅಭಿವೃದ್ಧಿ ಸಾಧ್ಯವಾಗಲಿದೆ.

ಇದಲ್ಲದೆ, ಮಂಗಳೂರು- ಬೆಂಗಳೂರು ರೈಲ್ವೇ ಮಾರ್ಗದ ಅಭಿವೃದ್ಧಿ ದೃಷ್ಟಿಯಿಂದ ಶಿರಾಡಿ ಘಾಟ್ ಭಾಗದ ಕಾರ್ಯಯೋಜನೆ ಬಗ್ಗೆ ಅಧ್ಯಯನ ಅಗತ್ಯವಿದೆ. ಶಿರಾಡಿ ಘಾಟ್ ನಲ್ಲಿ ಸದ್ಯ ಒಂದೇ ರೈಲು ಮಾರ್ಗವಿದ್ದು, ಸುಬ್ರಹ್ಮಣ್ಯ- ಸಕಲೇಶಪುರ ನಡುವೆ ಪ್ರತ್ಯೇಕ ರೈಲು ಹಳಿ ನಿರ್ಮಾಣಗೊಂಡರೆ ಪ್ರಯಾಣ ಮತ್ತು ಸರಕು ಸಾಕಣೆ ಸುಗಮವಾಗುತ್ತದೆ. ಇದರಿಂದ ಸಂಚಾರಕ್ಕೆ ಇರುವ ಪ್ರಮುಖ ಅಡಚಣೆ ನೀಗಿದಂತಾಗುತ್ತದೆ. ಮಂಗಳೂರು ಬಂದರು, ಏರ್ಪೋರ್ಟ್, ರೈಲ್ವೇ ಎಲ್ಲ ರೀತಿಯ ಸಂಪರ್ಕ ವ್ಯವಸ್ಥೆ ಇರುವ ನಗರವಾಗಿದ್ದು, ಕರಾವಳಿ ಅಭಿವೃದ್ಧಿ ದೃಷ್ಟಿಯಿಂದ ರಾಜಧಾನಿ ಬೆಂಗಳೂರಿಗೆ ಅತಿ ವೇಗದಲ್ಲಿ ತಲುಪಲು ರೈಲು ವ್ಯವಸ್ಥೆಯಾಗಬೇಕಿದೆ. ಇದಕ್ಕಾಗಿ ಮಂಗಳೂರು – ಬೆಂಗಳೂರು ರೈಲ್ವೇ ಹಾದಿಯನ್ನು ಅಭಿವೃದ್ಧಿ ಮಾಡಲೇಬೇಕಿದೆ ಎಂದು ಸಂಸದ ಚೌಟ ಪತ್ರದಲ್ಲಿ ಸಚಿವರಿಗೆ ಮನವಿ ಮಾಡಿದ್ದಾರೆ.
ಉಳಿದಂತೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ರೈಲ್ವೇ ಕಾಮಗಾರಿಗಳ ಪರಿಶೀಲನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚೆ ನಡೆಸುವ ಅಗತ್ಯವಿದೆ. ಇದಕ್ಕಾಗಿ ರೈಲ್ವೇ ಸಚಿವರಾಗಿ ತಾವು ಮಂಗಳೂರಿನಲ್ಲೇ ಸಭೆ ನಡೆಸಿದರೆ, ಅದರಲ್ಲಿ ದಕ್ಷಿಣ, ನೈರುತ್ಯ, ಕೊಂಕಣ ರೈಲ್ವೇ ವಿಭಾಗದ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಪಿಡಬ್ಲ್ಯುಡಿ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸುವ ಅವಕಾಶ ಸಿಗುತ್ತದೆ. ಎಲ್ಲ ಇಲಾಖೆಗಳನ್ನು ಒಟ್ಟು ಸೇರಿಸಿ ಮಂಗಳೂರಿನಲ್ಲಿ ಸಭೆಯನ್ನು ಮಾಡಲು ಉದ್ದೇಶಿಸಿದ್ದು ಈ ಸಭೆಯಲ್ಲಿ ಸಚಿವರಾಗಿ ತಾವು ಪಾಲ್ಗೊಳ್ಳಬೇಕೆಂದು ಪತ್ರ ಬರೆದು ಸಂಸದರು ಕೇಳಿಕೊಂಡಿದ್ದಾರೆ.
MP Brijesh Chowta writes letter to railway minister to improve Bangalore mangalore line.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm