ಬ್ರೇಕಿಂಗ್ ನ್ಯೂಸ್
14-07-24 10:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಸುರತ್ಕಲ್ ಬಳಿಯ ಎಸ್ಇಝೆಡ್ ವ್ಯಾಪ್ತಿಯಲ್ಲಿ ಮೀನು ಆಹಾರ ಉತ್ಪನ್ನ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ.ಗಳ ನಷ್ಟ ಉಂಟಾಗಿದೆ.
ಜೋಕಟ್ಟೆ ಬಳಿಯ ಅಥೆಂಟಿಕ್ ಓಷನ್ ಟ್ರೆಷರ್ ಎಂಬ ಮೀನು ಉತ್ಪನ್ನ ಘಟಕದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ. ಸುಮಾರು 10 ಕೋಟಿ ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗೆ ತುತ್ತಾಗಿದೆ ಎನ್ನಲಾಗಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಭಾನುವಾರ ರಜೆ ಕೊಡಲಾಗಿತ್ತು. ಹೀಗಾಗಿ ನೌಕರರು ಯಾರೂ ಇರಲಿಲ್ಲ ಎನ್ನಲಾಗಿದೆ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ.




ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಹೊರ ಭಾಗದಲ್ಲಿ ಮಳೆಯ ನಡುವೆಯೂ ಬಾನೆತ್ತರಕ್ಕೆ ಹಾರುತ್ತಿದ್ದ ಬೆಂಕಿ ಮತ್ತು ಹೊಗೆ ಸ್ಥಳೀಯರನ್ನು ಅಚ್ಚರಿಗೆ ನೂಕಿತ್ತು.
SEZ massive fire erupts, fish factory catches fire in Mangalore. Fire personals had come in large number to off the fire
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm