ಬ್ರೇಕಿಂಗ್ ನ್ಯೂಸ್
14-07-24 10:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಸುರತ್ಕಲ್ ಬಳಿಯ ಎಸ್ಇಝೆಡ್ ವ್ಯಾಪ್ತಿಯಲ್ಲಿ ಮೀನು ಆಹಾರ ಉತ್ಪನ್ನ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ.ಗಳ ನಷ್ಟ ಉಂಟಾಗಿದೆ.
ಜೋಕಟ್ಟೆ ಬಳಿಯ ಅಥೆಂಟಿಕ್ ಓಷನ್ ಟ್ರೆಷರ್ ಎಂಬ ಮೀನು ಉತ್ಪನ್ನ ಘಟಕದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ. ಸುಮಾರು 10 ಕೋಟಿ ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗೆ ತುತ್ತಾಗಿದೆ ಎನ್ನಲಾಗಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಭಾನುವಾರ ರಜೆ ಕೊಡಲಾಗಿತ್ತು. ಹೀಗಾಗಿ ನೌಕರರು ಯಾರೂ ಇರಲಿಲ್ಲ ಎನ್ನಲಾಗಿದೆ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ.




ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಹೊರ ಭಾಗದಲ್ಲಿ ಮಳೆಯ ನಡುವೆಯೂ ಬಾನೆತ್ತರಕ್ಕೆ ಹಾರುತ್ತಿದ್ದ ಬೆಂಕಿ ಮತ್ತು ಹೊಗೆ ಸ್ಥಳೀಯರನ್ನು ಅಚ್ಚರಿಗೆ ನೂಕಿತ್ತು.
SEZ massive fire erupts, fish factory catches fire in Mangalore. Fire personals had come in large number to off the fire
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm