ಕರಾವಳಿ, ಮಲೆನಾಡಿಗೆ ಜುಲೈ 15ಕ್ಕೆ ರೆಡ್ ಅಲರ್ಟ್ ಸೂಚನೆ ; ಭಾರೀ ಗಾಳಿ ಮಳೆಯ ಸಾಧ್ಯತೆ, ಮಂಗಳೂರಿನಲ್ಲಿ ಮಳೆ ಬಿರುಸು 

14-07-24 10:56 pm       Mangalore Correspondent   ಕರಾವಳಿ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಜುಲೈ 15ರ ಸೋಮವಾರ ರೆಡ್‌ ಅಲರ್ಟ್‌ ಘೋಷಿಸಿದೆ. 

ಮಂಗಳೂರು, ಜುಲೈ 14: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಜುಲೈ 15ರ ಸೋಮವಾರ ರೆಡ್‌ ಅಲರ್ಟ್‌ ಘೋಷಿಸಿದೆ. 

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಐದು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ. ಹಾಸನ ಹಾಗೂ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೊ ಅಲರ್ಟ್ ಸೂಚನೆ ನೀಡಲಾಗಿದೆ. ಭಾರಿ ಮಳೆಯ ಜತೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಕರಾವಳಿಯ ಮಂಗಳೂರು, ಉಡುಪಿ ಭಾಗದಲ್ಲಿ ಭಾನುವಾರ ಇಡೀ ದಿನ ಗಾಳಿ ಮಳೆಯಾಗಿದೆ. ಬೆಳ್ತಂಗಡಿ, ಪುತ್ತೂರು ಭಾಗದಲ್ಲಿಯೂ ಉತ್ತಮ ಮಳೆಯಾಗಿತ್ತು. ಕಳೆದ ನಾಲ್ಕು ದಿನಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಈಗ ಮತ್ತೆ ಮಳೆ ಬಿರುಸು ಪಡೆದಿದ್ದು ಗಾಳಿಯೊಂದಿಗೆ ತಾಳ ಹಾಕುತ್ತಿದೆ.

Mangalore heavy rains are expected, read alert in Karavali regions. The India Meteorological Department (IMD) has issued a red alert for heavy rainfall in the Dakshina Kannada and Udupi districts on Monday, July 15. Meanwhile, an orange alert has been issued for July 16 to 18. The region experienced steady rainfall throughout Sunday.