ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.
ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 07:26 pm
Mangalore Correspondent
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm