ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.

ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm