ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.
ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm