ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.

ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm