ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.

ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm