ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.

ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm