ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.

ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm