ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.

ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm