ಬ್ರೇಕಿಂಗ್ ನ್ಯೂಸ್
15-07-24 11:36 am Mangalore Correspondent ಕರಾವಳಿ
ಉಳ್ಳಾಲ, ಜುಲೈ 15: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬಸ್ಥರು ಭಾಗಿಯಾಗಿದ್ದಾರೆ.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಆಕೆಯ ಪತಿ ಕ್ರಿಕೆಟಿಗ ಕೆ.ಎಲ್.ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಕೈಫ್ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸೇರಿದಂತೆ ಒಟ್ಟು 9 ಮಂದಿ ಆಗಮಿಸಿದ್ದರು. ಮುಂಬೈನ ಉದ್ಯಮಿಯೊಬ್ಬರು ಎರಡು ತಿಂಗಳ ಹಿಂದೆ ಹರಕೆ ಕೋಲ ಬರೆಸಿದ್ದರು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದುಕೊಂಡರೆ, ರಾಹುಲ್ ಮತ್ತು ಅಹಾನ್ ಶೆಟ್ಟಿ ಕೋಲದಲ್ಲಿ ಭಾಗಿಯಾಗಿದ್ದಾರೆ.




ಭಾನುವಾರ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಪ್ರಮುಖರಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
Katrina Kaif made a splash at Anant Ambani and Radhika Merchant's wedding celebration over the weekend, dishing out couple goals as she posed with Vicky Kaushal. The actress had a brief stay in Mumbai and quickly jetted off to an undisclosed location post the festivity.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm