ಬ್ರೇಕಿಂಗ್ ನ್ಯೂಸ್
15-07-24 08:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯಿಂದ ಜುಲೈ 16ರ ವರೆಗೂ ರೆಡ್ ಅಲರ್ಟ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಮುಂಡಗೋಡ, ಹಳಿಯಾಳ ತಾಲೂಕು ಹೊರತುಪಡಿಸಿ ಉಳಿದ ಹತ್ತು ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿ ರಜೆ ನೀಡಿದ್ದರಿಂದ ಮಕ್ಕಳಿಗೆ ಸ್ವಲ್ಪಮಟ್ಟಿಗೆ ಗೊಂದಲ ಆಗಿತ್ತು. ಬೆಳಗ್ಗೆ 6.30ರ ವೇಳೆಗೆ ರಜೆಯ ಆದೇಶದ ಪ್ರಕಟಣೆ ನೀಡಲಾಗಿತ್ತು. ಅದು ಜನಸಾಮಾನ್ಯರಿಗೆ ತಲುಪುವ ಹೊತ್ತಿಗೆ ಕೆಲವು ಕಡೆ ಮಕ್ಕಳು ಶಾಲೆಗೆ ಹೊರಟಾಗಿತ್ತು. ಅನಂತರ, ಶಾಲೆಗಳಿಗೆ ಹಿಂತಿರುಗಿದ ವಿದ್ಯಮಾನವೂ ಆಗಿತ್ತು. ಸೋಮವಾರ ಇಡೀ ದಿನ ಮಳೆಗಿಂತ ಗಾಳಿಯೇ ಜೋರಾಗಿತ್ತು. ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗಿತ್ತು. ಆನಂತರ, ಮಳೆಗೆ ಕೊಂಚ ಬಿಡುವು ಇತ್ತಾದರೂ, ಗಾಳಿ ಆಗಿಂದಾಗ್ಗೆ ಜೋರಾಗಿಯೇ ಬೀಸುತ್ತಿತ್ತು.
ಸಂಜೆ ಹೊತ್ತಿಗೆ, ಜುಲೈ 16ರ ಮಂಗಳವಾರವೂ ರೆಡ್ ಅಲರ್ಟ್ ನೀಡಿದ್ದು, ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ಈ ಬಾರಿ ಕಳೆದೊಂದು ತಿಂಗಳಲ್ಲಿ ಮಳೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ದಿನ ರಜೆ ನೀಡಲಾಗಿದ್ದು, ಮಕ್ಕಳ ಪಾಲಿಗೆ ನೆಚ್ಚಿನ ಡಿಸಿಯಾಗಿ ಮುಲ್ಲೈ ಮುಗಿಲನ್ ಹೆಸರು ಪಡೆದಿದ್ದಾರೆ.
Due to high rainfall in the twin districts a holiday has been declared in Dakshina Kannada and Udupi districts for schools and pre-university colleges on Tuesday, July 16.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am