ಬ್ರೇಕಿಂಗ್ ನ್ಯೂಸ್
15-07-24 08:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯಿಂದ ಜುಲೈ 16ರ ವರೆಗೂ ರೆಡ್ ಅಲರ್ಟ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಮುಂಡಗೋಡ, ಹಳಿಯಾಳ ತಾಲೂಕು ಹೊರತುಪಡಿಸಿ ಉಳಿದ ಹತ್ತು ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿ ರಜೆ ನೀಡಿದ್ದರಿಂದ ಮಕ್ಕಳಿಗೆ ಸ್ವಲ್ಪಮಟ್ಟಿಗೆ ಗೊಂದಲ ಆಗಿತ್ತು. ಬೆಳಗ್ಗೆ 6.30ರ ವೇಳೆಗೆ ರಜೆಯ ಆದೇಶದ ಪ್ರಕಟಣೆ ನೀಡಲಾಗಿತ್ತು. ಅದು ಜನಸಾಮಾನ್ಯರಿಗೆ ತಲುಪುವ ಹೊತ್ತಿಗೆ ಕೆಲವು ಕಡೆ ಮಕ್ಕಳು ಶಾಲೆಗೆ ಹೊರಟಾಗಿತ್ತು. ಅನಂತರ, ಶಾಲೆಗಳಿಗೆ ಹಿಂತಿರುಗಿದ ವಿದ್ಯಮಾನವೂ ಆಗಿತ್ತು. ಸೋಮವಾರ ಇಡೀ ದಿನ ಮಳೆಗಿಂತ ಗಾಳಿಯೇ ಜೋರಾಗಿತ್ತು. ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗಿತ್ತು. ಆನಂತರ, ಮಳೆಗೆ ಕೊಂಚ ಬಿಡುವು ಇತ್ತಾದರೂ, ಗಾಳಿ ಆಗಿಂದಾಗ್ಗೆ ಜೋರಾಗಿಯೇ ಬೀಸುತ್ತಿತ್ತು.
ಸಂಜೆ ಹೊತ್ತಿಗೆ, ಜುಲೈ 16ರ ಮಂಗಳವಾರವೂ ರೆಡ್ ಅಲರ್ಟ್ ನೀಡಿದ್ದು, ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ಈ ಬಾರಿ ಕಳೆದೊಂದು ತಿಂಗಳಲ್ಲಿ ಮಳೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ದಿನ ರಜೆ ನೀಡಲಾಗಿದ್ದು, ಮಕ್ಕಳ ಪಾಲಿಗೆ ನೆಚ್ಚಿನ ಡಿಸಿಯಾಗಿ ಮುಲ್ಲೈ ಮುಗಿಲನ್ ಹೆಸರು ಪಡೆದಿದ್ದಾರೆ.
Due to high rainfall in the twin districts a holiday has been declared in Dakshina Kannada and Udupi districts for schools and pre-university colleges on Tuesday, July 16.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm