ಬ್ರೇಕಿಂಗ್ ನ್ಯೂಸ್
15-07-24 08:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯಿಂದ ಜುಲೈ 16ರ ವರೆಗೂ ರೆಡ್ ಅಲರ್ಟ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಮುಂಡಗೋಡ, ಹಳಿಯಾಳ ತಾಲೂಕು ಹೊರತುಪಡಿಸಿ ಉಳಿದ ಹತ್ತು ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿ ರಜೆ ನೀಡಿದ್ದರಿಂದ ಮಕ್ಕಳಿಗೆ ಸ್ವಲ್ಪಮಟ್ಟಿಗೆ ಗೊಂದಲ ಆಗಿತ್ತು. ಬೆಳಗ್ಗೆ 6.30ರ ವೇಳೆಗೆ ರಜೆಯ ಆದೇಶದ ಪ್ರಕಟಣೆ ನೀಡಲಾಗಿತ್ತು. ಅದು ಜನಸಾಮಾನ್ಯರಿಗೆ ತಲುಪುವ ಹೊತ್ತಿಗೆ ಕೆಲವು ಕಡೆ ಮಕ್ಕಳು ಶಾಲೆಗೆ ಹೊರಟಾಗಿತ್ತು. ಅನಂತರ, ಶಾಲೆಗಳಿಗೆ ಹಿಂತಿರುಗಿದ ವಿದ್ಯಮಾನವೂ ಆಗಿತ್ತು. ಸೋಮವಾರ ಇಡೀ ದಿನ ಮಳೆಗಿಂತ ಗಾಳಿಯೇ ಜೋರಾಗಿತ್ತು. ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗಿತ್ತು. ಆನಂತರ, ಮಳೆಗೆ ಕೊಂಚ ಬಿಡುವು ಇತ್ತಾದರೂ, ಗಾಳಿ ಆಗಿಂದಾಗ್ಗೆ ಜೋರಾಗಿಯೇ ಬೀಸುತ್ತಿತ್ತು.
ಸಂಜೆ ಹೊತ್ತಿಗೆ, ಜುಲೈ 16ರ ಮಂಗಳವಾರವೂ ರೆಡ್ ಅಲರ್ಟ್ ನೀಡಿದ್ದು, ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ಈ ಬಾರಿ ಕಳೆದೊಂದು ತಿಂಗಳಲ್ಲಿ ಮಳೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ದಿನ ರಜೆ ನೀಡಲಾಗಿದ್ದು, ಮಕ್ಕಳ ಪಾಲಿಗೆ ನೆಚ್ಚಿನ ಡಿಸಿಯಾಗಿ ಮುಲ್ಲೈ ಮುಗಿಲನ್ ಹೆಸರು ಪಡೆದಿದ್ದಾರೆ.
Due to high rainfall in the twin districts a holiday has been declared in Dakshina Kannada and Udupi districts for schools and pre-university colleges on Tuesday, July 16.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm