ಬ್ರೇಕಿಂಗ್ ನ್ಯೂಸ್
07-12-20 01:43 pm Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್, 7: NCTE ಮಾನದಂಡ ನೆಪದಲ್ಲಿ ಸ್ಥಗಿತಗೊಳಿಸಲು ಉದ್ದೇಶಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ವೃತ್ತಿಪರ ಶಿಕ್ಷಣ (B.P.Ed) ಕೋರ್ಸ್ ಅನ್ನು ಕ್ರೀಡಾ ಪ್ರೇಮಿಗಳ ಒಕ್ಕೊರಳ ಅಭಿಯಾನದ ಫಲವಾಗಿ ಮುಂದುವರಿಸಲು ಅನುಮೋದನೆ ದೊರೆತಿದ್ದು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಂಗಳೂರು ವಿವಿಯಲ್ಲಿ ಬಡ ಕ್ರೀಡಾಪಟುಗಳ ವೃತ್ತಿ ಬದುಕಿಗೆ ಆಶಾಕಿರಣವಾಗಿರುವ B.P.Ed ಕೋರ್ಸ್ ಅನ್ನು NCTE ಮಾನದಂಡದ ಕಾರಣವೊಡ್ಡಿ ವಿವಿಯ ಅಧಿಕಾರಿಗಳು ಸ್ಥಗಿತಗೊಳಿಸಲು ಮುಂದಾಗಿದ್ದರು. ಇದರಿಂದ ದ.ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳ ಬಡ ವಿದ್ಯಾರ್ಥಿಗಳು ಖಾಸಗಿ ಕಾಲೇಜಿನಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿ ವ್ಯಯಿಸಿ ವೃತ್ತಿಪರ ಶಿಕ್ಷಣ ಕಲಿಯುವ ಅನಿವಾರ್ಯತೆ ಎದುರಾಗಿತ್ತು. ಈ ವಿಚಾರ ಅರಿತ ಅವಿಭಜಿತ ದ.ಕನ್ನಡ, ಉಡುಪಿ ಜಿಲ್ಲೆಯ ಕ್ರೀಡಾ ಪ್ರೇಮಿಗಳು ಅಭಿಯಾನ ನಡೆಸಿದ್ದರು.
ವಿ.ವಿ ಉಪ ಕುಲಪತಿ ಸುಬ್ರಮಣ್ಯ ಯಡಿಪಡಿತ್ತಾಯ, ಕ್ಷೇತ್ರದ ಶಾಸಕ ಯು.ಟಿ.ಖಾದರ್, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಯಾವುದೇ ಕಾರಣಕ್ಕೂ ವಿ.ವಿ.ಯಲ್ಲಿ B.P.Ed ಕೋರ್ಸ್ ನಿಲ್ಲಿಸಬಾರದೆಂದು ಒತ್ತಾಯಿಸಿದ್ದರು.

ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್, ವಿಶೇಷ ಮುತುವರ್ಜಿ ವಹಿಸಿ ಈ ಬಗ್ಗೆ ವಿವಿ ಉಪ ಕುಲಪತಿಗಳಲ್ಲಿ ಚರ್ಚಿಸಿದರ ಫಲವಾಗಿ ವಿ.ವಿ ಆಡಳಿತವು ಇದೀಗ ಮತ್ತೆ ದೈಹಿಕ ಶಿಕ್ಷಣ ಕೋರ್ಸನ್ನು ಆರಂಭಿಸಲು ಮುಂದಾಗಿರುವುದು ಕ್ರೀಡಾಭಿಮಾನಿಗಳು, ಬಡ ಕ್ರೀಡಾಪಟುಗಳಿಗೆ ಸಂತಸ ತಂದಿದೆ.
ವಿ.ವಿ ಯಲ್ಲಿ ವೃತ್ತಿಪರ ದೈಹಿಕ ಶಿಕ್ಷಣ(B.P.Ed) ಕೋರ್ಸನ್ನು ಮತ್ತೆ ಪ್ರಾರಂಭಿಸಲು ಶ್ರಮಿಸಿದ ಕ್ರೀಡಾಭಿಮಾನಿಗಳು ಮತ್ತು ಉಳ್ಳಾಲ ಶಾಸಕ ಯು.ಟಿ. ಖಾದರ್ ಅವರನ್ನು ಕಾಪಿಕಾಡು ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಸ್ಥಾಪಕಾಧ್ಯಕ್ಷರಾದ ಗೋಪಿನಾಥ್ ಕಾಪಿಕಾಡ್ ಅವರು ಪ್ರಶಂಸಿದ್ದಾರೆ. ಹೆಡ್ ಲೈನ್ ಕರ್ನಾಟಕ ವೆಬ್ ನಲ್ಲಿ ಇದರ ಬಗ್ಗೆ ಮೊಟ್ಟಮೊದಲಿಗೆ ಸುದ್ದಿ ಮಾಡಿ ಗಮನಸೆಳೆಯಲಾಗಿತ್ತು.

ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗವು ಶೈಕ್ಷಣಿಕ ವರ್ಷ 2020-21ನೇ ಸಾಲಿನ ಬಿ.ಪಿ.ಎಡ್ (B.P.Ed) ಪದವಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. (ಸಾಮಾನ್ಯ ವರ್ಗ ಹಾಗೂ ಪಾವತಿ ವರ್ಗ), ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 14 -12 -2020 ಆಗಿರುತ್ತದೆ.
ಇದನ್ನೂ ಓದಿ: ಮಂಗಳೂರು ವಿವಿಯಲ್ಲಿ ಮತ್ತೆ ಎಡವಟ್ಟು; ಬಿಪಿಎಡ್ ಕೋರ್ಸ್ ಮುಚ್ಚಲು ಕಸರತ್ತು!
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm