ಬ್ರೇಕಿಂಗ್ ನ್ಯೂಸ್
07-12-20 01:43 pm Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್, 7: NCTE ಮಾನದಂಡ ನೆಪದಲ್ಲಿ ಸ್ಥಗಿತಗೊಳಿಸಲು ಉದ್ದೇಶಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ವೃತ್ತಿಪರ ಶಿಕ್ಷಣ (B.P.Ed) ಕೋರ್ಸ್ ಅನ್ನು ಕ್ರೀಡಾ ಪ್ರೇಮಿಗಳ ಒಕ್ಕೊರಳ ಅಭಿಯಾನದ ಫಲವಾಗಿ ಮುಂದುವರಿಸಲು ಅನುಮೋದನೆ ದೊರೆತಿದ್ದು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಂಗಳೂರು ವಿವಿಯಲ್ಲಿ ಬಡ ಕ್ರೀಡಾಪಟುಗಳ ವೃತ್ತಿ ಬದುಕಿಗೆ ಆಶಾಕಿರಣವಾಗಿರುವ B.P.Ed ಕೋರ್ಸ್ ಅನ್ನು NCTE ಮಾನದಂಡದ ಕಾರಣವೊಡ್ಡಿ ವಿವಿಯ ಅಧಿಕಾರಿಗಳು ಸ್ಥಗಿತಗೊಳಿಸಲು ಮುಂದಾಗಿದ್ದರು. ಇದರಿಂದ ದ.ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳ ಬಡ ವಿದ್ಯಾರ್ಥಿಗಳು ಖಾಸಗಿ ಕಾಲೇಜಿನಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿ ವ್ಯಯಿಸಿ ವೃತ್ತಿಪರ ಶಿಕ್ಷಣ ಕಲಿಯುವ ಅನಿವಾರ್ಯತೆ ಎದುರಾಗಿತ್ತು. ಈ ವಿಚಾರ ಅರಿತ ಅವಿಭಜಿತ ದ.ಕನ್ನಡ, ಉಡುಪಿ ಜಿಲ್ಲೆಯ ಕ್ರೀಡಾ ಪ್ರೇಮಿಗಳು ಅಭಿಯಾನ ನಡೆಸಿದ್ದರು.
ವಿ.ವಿ ಉಪ ಕುಲಪತಿ ಸುಬ್ರಮಣ್ಯ ಯಡಿಪಡಿತ್ತಾಯ, ಕ್ಷೇತ್ರದ ಶಾಸಕ ಯು.ಟಿ.ಖಾದರ್, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಯಾವುದೇ ಕಾರಣಕ್ಕೂ ವಿ.ವಿ.ಯಲ್ಲಿ B.P.Ed ಕೋರ್ಸ್ ನಿಲ್ಲಿಸಬಾರದೆಂದು ಒತ್ತಾಯಿಸಿದ್ದರು.

ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್, ವಿಶೇಷ ಮುತುವರ್ಜಿ ವಹಿಸಿ ಈ ಬಗ್ಗೆ ವಿವಿ ಉಪ ಕುಲಪತಿಗಳಲ್ಲಿ ಚರ್ಚಿಸಿದರ ಫಲವಾಗಿ ವಿ.ವಿ ಆಡಳಿತವು ಇದೀಗ ಮತ್ತೆ ದೈಹಿಕ ಶಿಕ್ಷಣ ಕೋರ್ಸನ್ನು ಆರಂಭಿಸಲು ಮುಂದಾಗಿರುವುದು ಕ್ರೀಡಾಭಿಮಾನಿಗಳು, ಬಡ ಕ್ರೀಡಾಪಟುಗಳಿಗೆ ಸಂತಸ ತಂದಿದೆ.
ವಿ.ವಿ ಯಲ್ಲಿ ವೃತ್ತಿಪರ ದೈಹಿಕ ಶಿಕ್ಷಣ(B.P.Ed) ಕೋರ್ಸನ್ನು ಮತ್ತೆ ಪ್ರಾರಂಭಿಸಲು ಶ್ರಮಿಸಿದ ಕ್ರೀಡಾಭಿಮಾನಿಗಳು ಮತ್ತು ಉಳ್ಳಾಲ ಶಾಸಕ ಯು.ಟಿ. ಖಾದರ್ ಅವರನ್ನು ಕಾಪಿಕಾಡು ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಸ್ಥಾಪಕಾಧ್ಯಕ್ಷರಾದ ಗೋಪಿನಾಥ್ ಕಾಪಿಕಾಡ್ ಅವರು ಪ್ರಶಂಸಿದ್ದಾರೆ. ಹೆಡ್ ಲೈನ್ ಕರ್ನಾಟಕ ವೆಬ್ ನಲ್ಲಿ ಇದರ ಬಗ್ಗೆ ಮೊಟ್ಟಮೊದಲಿಗೆ ಸುದ್ದಿ ಮಾಡಿ ಗಮನಸೆಳೆಯಲಾಗಿತ್ತು.

ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗವು ಶೈಕ್ಷಣಿಕ ವರ್ಷ 2020-21ನೇ ಸಾಲಿನ ಬಿ.ಪಿ.ಎಡ್ (B.P.Ed) ಪದವಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. (ಸಾಮಾನ್ಯ ವರ್ಗ ಹಾಗೂ ಪಾವತಿ ವರ್ಗ), ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 14 -12 -2020 ಆಗಿರುತ್ತದೆ.
ಇದನ್ನೂ ಓದಿ: ಮಂಗಳೂರು ವಿವಿಯಲ್ಲಿ ಮತ್ತೆ ಎಡವಟ್ಟು; ಬಿಪಿಎಡ್ ಕೋರ್ಸ್ ಮುಚ್ಚಲು ಕಸರತ್ತು!
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm