ಬ್ರೇಕಿಂಗ್ ನ್ಯೂಸ್
16-07-24 02:42 pm Mangalore Correspondent ಕರಾವಳಿ
ಪುತ್ತೂರು, ಜುಲೈ.16: ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರಧಾರ ನದಿಯಲ್ಲಿ ನಿನ್ನೆ ರಾತ್ರಿ ಆನೆ ಮರಿಯೊಂದರ ಮೃತದೇಹ ತೇಲಿಬಂದಿದ್ದು ಕುತೂಹಲ ಸೃಷ್ಟಿಯಾಗಿದೆ.
ರಾತ್ರಿ ವೇಳೆ ಸ್ಥಳೀಯ ಸಿಬಂದಿ ನದಿಯಲ್ಲಿ ನೀರಿನ ಪ್ರಮಾಣ ನೋಡಲು ಸೇತುವೆ ಬಳಿ ಹೋಗಿದ್ದಾಗ ಆನೆ ಮರಿ ಕೊಚ್ಚಿ ಹೋಗುತ್ತಿರುವುದು ಕಂಡುಬಂದಿದೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಅಲ್ಲಿನ ಶೌಚಾಲಯ ಮತ್ತಿತರ ಕಟ್ಟಡಗಳು ನೀರಿನಲ್ಲಿ ಮುಳುಗಿದ್ದವು. ಇದು ಕುಮಾರಧಾರ ನದಿ ತುಂಬಿ ಹರಿಯುತ್ತಿರುವುದಕ್ಕೆ ಸಾಕ್ಷಿಯಾಗಿತ್ತು.
ರಾತ್ರಿ ವೇಳೆ ಆಗತಾನೇ ಹೆರಿಗೆಯಾದಂತಿದ್ದ ಆನೆ ಮರಿ ನದಿಯಲ್ಲಿ ಪತ್ತೆಯಾಗಿದೆ. ಹೀಗಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಗೆ ಹೆಣ್ಣು ಕಾಡಾನೆ ಪ್ರಸವಕ್ಕೀಡಾಗಿ ಮರಿಯನ್ನು ಜೊತೆಗೆ ಒಯ್ಯಲಾಗದ ಸ್ಥಿತಿಯಾಗಿತ್ತೇ ಅನ್ನುವ ಪ್ರಶ್ನೆ ಎದುರಾಗಿದೆ. ಆನೆ ಮರಿಯ ದೇಹ ಬಿಳಿಯಾಗಿದ್ದು ನೀರಿನಲ್ಲಿ ತೇಲಿಕೊಂಡು ಬಂದಿದೆ. ಸತ್ತು ಒಂದೆರಡು ದಿನ ಆದಬಳಿಕವೇ ನೀರಿನಲ್ಲಿ ತೇಲುವುದರಿಂದ ತಾಯಿ ಕಾಡಾನೆ ಬಗ್ಗೆಯೂ ಆತಂಕ ಇದೆ. ಘಟ್ಟಗಳಲ್ಲಿ ಧುಮ್ಮಿಕ್ಕುವ ನದಿಗಳನ್ನು ದಾಟುವಾಗಲೋ ಏನೋ ಆನೆ ಮರಿ ನೀರುಪಾಲಾಗಿರುವ ಸಾಧ್ಯತೆಯಿದೆ.
ರಾತ್ರಿ ವೇಳೆ ಆನೆ ಮರಿಯ ಮೃತದೇಹವನ್ನು ನೀರಿನಿಂದ ಮೇಲೆತ್ತುವುದು ಸಾಧ್ಯವಾಗಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬಂದಿ ಆನೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ.
Baby elephant dies after heavy rains in Subramanya Mangalore.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm