ಬ್ರೇಕಿಂಗ್ ನ್ಯೂಸ್
17-07-24 03:58 pm Mangalore Correspondent ಕರಾವಳಿ
Photo credits : Karnataka Tak
ಮಂಗಳೂರು, ಜುಲೈ.17: ಸಿದ್ದರಾಮಯ್ಯ ಅವರನ್ನು ಬಹಳ ಕಾಲದಿಂದ ನೋಡಿಕೊಂಡಿದ್ದೇನೆ. ಮುಡಾ, ವಾಲ್ಮೀಕಿ ನಿಗಮದ ಹಗರಣ ನೋಡಿಕೊಂಡು ಯಾಕೆ ಸುಮ್ಮನಿದ್ದಾರೆ ಅಂತ ಸಂಶಯ ಕಾಡುತ್ತಿದೆ. ಸಿದ್ದರಾಮಯ್ಯ ಅವರು ಹಿಂದೆ ಇದ್ದ ರೀತಿ ಈಗ ಇಲ್ಲ. ತುಂಬ ಬದಲಾಗಿದ್ದಾರೆ. ಹತ್ತು ಹನ್ನೆರಡು ಸೈಟ್ ಪಡೆಯುವಷ್ಟು ಬದಲಾಗಿದ್ದಾರೆ ಅಂತ ನನಗೆ ನಂಬೋಕೆ ಆಗ್ತಿಲ್ಲ ಎಂದು ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ. ಸೋಮಣ್ಣ ವ್ಯಂಗ್ಯವಾಡಿದ್ದಾರೆ.
ಮಾಧ್ಯಮದವರು ವಾಲ್ಮೀಕಿ ಹಗರಣದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಾಲ್ಮೀಕಿ ಹಗರಣದ ದುಡ್ಡು ಒಂದು ಬಳ್ಳಾರಿಗೆ ಹೋಗಿದ್ದಲ್ಲ. 187 ಕೋಟಿ ಅಂಥ ಎಷ್ಟು ಬಳ್ಳಾರಿಗಳಿಗೆ ಹೋಗಿದೆಯೋ ಗೊತ್ತಿಲ್ಲ. ಅದರ ಬಗ್ಗೆ ತನಿಖೆ ಆಗ್ತಾ ಇದೆ. ಕಳ್ಳರು ಸಿಕ್ಕಿಬೀಳುತ್ತಾರೆ. ಆದರೆ, ಮುಡಾ, ವಾಲ್ಮೀಕಿ ಹಗರಣದ ಜೊತೆಗೆ ಏಗುವುದಕ್ಕಿಂತ ಸಿದ್ದರಾಮಯ್ಯ ಅವರು ರಾಜಿನಾಮೆ ಕೊಟ್ಟು ಹೊರಬರೋದು ಒಳ್ಳೆದು ಅನಿಸುತ್ತೆ. ಆ ರೀತಿಯ ಕೆಲಸ ಮಾಡಿಕೊಂಡು ಬಂದವರಲ್ಲ ಸಿದ್ದರಾಮಯ್ಯ. ಹಾಗಾಗಿ, ಹಗರಣದ ವಿಚಾರದಲ್ಲಿ ಅವರು ಕೈಕಟ್ಟಿ ಕೂರದೆ ರಾಜಿನಾಮೆ ಕೊಟ್ಟು ಹೊರಬರಲಿ ಅಂತ ಹೇಳುತ್ತೇನೆ ಎಂದರು.
ರೈಲ್ವೇ ಅಧಿಕಾರಿಗಳ ಸಭೆಗೆ ಸೂಚನೆ
ಮಂಗಳೂರು ಪ್ರತ್ಯೇಕ ರೈಲ್ವೇ ವಿಭಾಗ ಮಾಡುತ್ತೀರಾ ಎಂಬ ಪ್ರಶ್ನೆಗೆ, ಕೊಂಕಣ ರೈಲ್ವೇ, ದಕ್ಷಿಣ ರೈಲ್ವೇ ಮತ್ತು ದಕ್ಷಿಣ – ಪಶ್ಚಿಮ ವಿಭಾಗದ ರೈಲ್ವೇ ಜನರಲ್ ಮ್ಯಾನೇಜರ್ ಗಳು, ಡಿಆರ್ ಎಂಗಳು ಮತ್ತು ಈ ಭಾಗದ ಸಂಸದರು, ಶಾಸಕರೆಲ್ಲ ಜುಲೈ 20ರಂದು ಸಭೆ ನಡೆಸಲು ಸೂಚನೆ ನೀಡಿದ್ದೇನೆ. ಎಲ್ಲರು ಕುಳಿತು ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲು ಹೇಳಿದ್ದೇನೆ. ಆನಂತರ, ವಿಭಾಗದ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ ಎಂದು ಹೇಳಿದರು.
ಕೊಂಕಣ ರೈಲ್ವೇ ವಿಲೀನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ವಿಲೀನದ ಬಗ್ಗೆ ಹೇಳಲು ಬರುವುದಿಲ್ಲ. ಈ ಭಾಗಕ್ಕೆ ಒಳ್ಳೆದು ಆಗಲು ಏನು ಆಗಬೇಕೋ ಅದನ್ನು ಕುಳಿತು ಚರ್ಚೆ ಮಾಡಬೇಕು. ನಮ್ಮ ಸಂಸದ ಬ್ರಿಜೇಶ್ ಚೌಟ ಮತ್ತು ಕೋಟ ಶ್ರೀನಿವಾಸ ಪೂಜಾರಿಯವರು ಹಾಗೂ ಈ ಭಾಗದ ಶಾಸಕರು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತಾರೆ. ಅದನ್ನು ಕಾರ್ಯಗತ ಮಾಡಲು ನಾನಿದ್ದೇನೆ ಎಂದರು.
V Somanna slams CM Siddaramaiah in Mangalore on Muda scam, also he alleged that why CM is so silent in Valmiki scam. Stressing on the need to strike a coordination between various divisions of Railways, the minister said that he emphasises on maintaining a cordial relation with officials.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm