ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.




ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
07-01-26 12:12 pm
Bangalore Correspondent
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm