ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.
ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm