ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.




ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am