ಬ್ರೇಕಿಂಗ್ ನ್ಯೂಸ್
18-07-24 10:22 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗ ಹೊರತುಪಡಿಸಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲೂಕಿನಲ್ಲಿ ಜುಲೈ 19ರಂದು ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಜುಲೈ 18ರ ಗುರುವಾರವೂ ಮಂಗಳೂರು, ಮೂಲ್ಕಿ- ಮೂಡುಬಿದ್ರೆ, ಉಳ್ಳಾಲ ಹೊರತುಪಡಿಸಿ ಶಾಲೆ, ಕಾಲೇಜಿಗೆ ರಜೆ ನೀಡಿ ಆದೇಶ ಮಾಡಲಾಗಿತ್ತು. ಅದೇ ರೀತಿಯ ಆದೇಶವನ್ನು ಜುಲೈ 19ರಂದೂ ಹೊರಡಿಸಲಾಗಿದೆ. ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶಗಳಾದ ಬೆಳ್ತಂಗಡಿ, ನಾರಾವಿ, ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಗುರುವಾರವೂ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಮಳೆ ಕಡಿಮೆಯಿತ್ತು. ಇಡೀ ದಿನ ಕಪ್ಪಗಿನ ಮೋಡ ಕವಿದ ವಾತಾವರಣ ಮತ್ತು ಆಗಿಂದಾಗ್ಗೆ ಜಿಟಿ ಜಿಟಿ ಮಳೆಯಾಗಿತ್ತು. ಮಂಗಳೂರು, ಮೂಡುಬಿದ್ರೆಯಲ್ಲಿ ಶಾಲೆಗಳೂ ತೆರೆದಿದ್ದವು.
ಉಡುಪಿ ಜಿಲ್ಲೆಯಾದ್ಯಂತ ಜುಲೈ 19ರಂದು ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಳಿದಂತೆ, ಹಾಸನ, ಕೊಡಗಿನಲ್ಲೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಭಾರೀ ಮಳೆ ಇದ್ದುದರಿಂದ ಶಾಲೆ, ಕಾಲೇಜುಗಳಿಗೆ ರಜೆ ಇತ್ತು. ಜುಲೈ 19ರಂದು ರಜೆ ನೀಡಿರುವ ಮಾಹಿತಿ ಇನ್ನೂ ಬಂದಿಲ್ಲ.
ತುಂಬಿ ಹರಿದ ನೇತ್ರಾವತಿ, ಫಲ್ಗುಣಿ
ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ತೀವ್ರಗೊಂಡಿದ್ದು, ಪಶ್ಚಿಮದತ್ತ ಹರಿಯುವ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ನಿಂತಿದೆ. ನೇತ್ರಾವತಿ ನದಿಯಲ್ಲೂ ನೀರು ತುಂಬಿಕೊಂಡಿದ್ದು, ಬಂಟ್ವಾಳ ತಾಲೂಕಿನ ನಂದಾವರ, ಆಲಡ್ಕ, ಗೂಡಿನಬಳಿ ಏರಿಯಾದಲ್ಲಿ ಪ್ರತಿ ವರ್ಷದಂತೆ ನೆರೆ ಆವರಿಸಿದೆ. ಈ ಭಾಗದಲ್ಲಿ ಎಂಟು ಮನೆಗಳ ನಿವಾಸಿಗಳು ಬೇರೆ ಕಡೆಗೆ ಸ್ಥಳಾಂತರಗೊಂಡಿದ್ದಾರೆ. ಫಲ್ಗುಣಿ ನದಿಯಲ್ಲೂ ನೆರೆ ಕಾಣಿಸಿಕೊಂಡಿದ್ದು, ಅದ್ಯಪಾಡಿ ಆಸುಪಾಸಿನಲ್ಲಿ ನೆರೆ ನೀರು ಮನೆಗಳಿಗೆ ಮತ್ತು ಕೃಷಿ ತೋಟಕ್ಕೆ ನುಗ್ಗಿದೆ.
Heavy rains, landslide, Schools of Five taluks of Dakshina Kannada Mangalore declared. holiday for Udupi Hassan and Kodagu schools also have been issued holiday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm