ಬ್ರೇಕಿಂಗ್ ನ್ಯೂಸ್
19-07-24 12:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಇತ್ತೀಚೆಗೆ ರಿಯಲ್ ಎಸ್ಟೇಟ್ ಬಿಲ್ಡರುಗಳ ಸಿಟ್ಟಿನ ಕಾರಣಕ್ಕೆ ವರ್ಗಾವಣೆಯಾದರೂ, ಅದಕ್ಕೆ ಟ್ರಿಬ್ಯುನಲ್ ಮೂಲಕ ತಡೆ ತಂದುಕೊಂಡು ಮಂಗಳೂರಿನಲ್ಲೇ ಝಂಡಾವೂರಿದ್ದ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಲೋಕಾಯುಕ್ತ ಪೊಲೀಸರು ಮಂಗಳೂರು ಪಾಲಿಕೆಯ ಕಚೇರಿ ಮತ್ತು ಮಣ್ಣಗುಡ್ಡದ ಆಯುಕ್ತರ ಬಂಗಲೆಗೆ ಏಕಕಾಲದಲ್ಲಿ ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಆನಂದ ಸಿ.ಎಲ್ ಮೂಲತಃ ಮಂಡ್ಯದವರಾಗಿದ್ದು ಸೈನಿಕನಾಗಿ ನಿವೃತ್ತಿ ಪಡೆದು ಕೆಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೈಸೂರಿನಲ್ಲಿ ವಿಭಾಗಾಧಿಕಾರಿ ಮತ್ತು ಬೆಂಗಳೂರು ಬಿಡಿಎಯಲ್ಲಿ ಅಧಿಕಾರಿಯಾಗಿದ್ದ ವೇಳೆ ಅಕ್ರಮ ಆಸ್ತಿ ಮಾಡಿಕೊಂಡ ಬಗ್ಗೆ ಆನಂದ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಹೋಗಿತ್ತು.
ಇದೀಗ ರಾಜ್ಯಾದ್ಯಂತ 54 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರಿನಲ್ಲಿ ಅಕ್ರಮ ಆಸ್ತಿ ಮಾಡಿದ್ದಾರೆಂಬ ಆರೋಪದಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಸೇರಿದಂತೆ ಆನಂದ ಸಿಎಲ್ ಅವರು ಅಕ್ರಮ ಆಸ್ತಿ ಮಾಡಿಟ್ಟ ಮೈಸೂರು, ಬೆಂಗಳೂರು, ಮಂಗಳೂರಿನಲ್ಲಿ ದಾಳಿ ಮಾಡಿದ್ದಾರೆ. ಮಂಗಳೂರಿನಲ್ಲಿ ಡಿವೈಎಸ್ಪಿ ಬಸವರಾಜ ಮಗ್ದುಂ ನೇತೃತ್ವದಲ್ಲಿ ದಾಳಿಯಾಗಿದೆ. 


ಇತ್ತೀಚೆಗೆ ಮಂಗಳೂರಿನ ಬಲ್ಮಠದಲ್ಲಿ ಪ್ರಭಾವಿ ಬಿಲ್ಡರ್ ಒಬ್ಬರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪಾಲಿಕೆ ಕಮಿಷನರ್ ಆನಂದ ಸಿ.ಎಲ್ ಅವರು ಬಿಲ್ಡರ್ ಗೆ ನೋಟೀಸ್ ನೀಡಿದ್ದಲ್ಲದೆ, ಮುಂದಿನ ಆದೇಶದ ವರೆಗೆ ಕಾಮಗಾರಿ ನಡೆಸದಂತೆ ಸೂಚಿಸಿದ್ದರು. ಇದಲ್ಲದೆ, ಮಂಗಳೂರಿನ ಒಬ್ಬ ಪ್ರಭಾವಿ ಇಂಜಿನಿಯರ್, ಇತರ ಬಿಲ್ಡರುಗಳ ಮೇಲೆಯೂ ಕಮಿಷನರ್ ನೋಟಿಸ್ ಮಾಡಿದ್ದರು. ಇದರ ಬೆನ್ನಲ್ಲೆ ಕಮಿಷನರ್ ಹುದ್ದೆಯಿಂದ ವರ್ಗಾವಣೆ ಆಗಿದ್ದರು. ಆದರೆ, ಆನಂದ ಸಿಎಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದು ತನ್ನ ವರ್ಗಾವಣೆಯನ್ನು ತಡೆ ಹಾಕಿದ್ದರು.
Mangaluru City Corporation Commissioner C L Ananda house and office raided by Lokayukta. The Karnataka Lokayukta on Friday morning launched massive search operations in 55 places in six districts across the state. This is the second large-scale raid targetting erring government officials in over a week
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm