ಬ್ರೇಕಿಂಗ್ ನ್ಯೂಸ್
19-07-24 09:05 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಜುಲೈ 20ರ ಶನಿವಾರವೂ ರೆಡ್ ಅಲರ್ಟ್ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು, ಉಳ್ಳಾಲ, ಮೂಡುಬಿದ್ರೆ ಹೊರತುಪಡಿಸಿ ಐದು ಜಿಲ್ಲೆಗಳಿಗೆ ರಜೆ ನೀಡಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಶನಿವಾರದ ರಜೆಯೊಂದಿಗೆ ಈ ವಾರ ಪೂರ್ತಿ ಶಾಲಾ ಮಕ್ಕಳಿಗೆ ರಜೆ ನೀಡಿದಂತಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಇದೇ ಪರಿಸ್ಥಿತಿಯಾಗಿದೆ. ಪಶ್ಚಿಮ ಘಟ್ಟದ ಸಾಲುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಸಕಲೇಶಪುರ, ಹಾಸನ, ಕೊಡಗಿನಲ್ಲೂ ಭಾರೀ ಮಳೆಯಿಂದಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ.
ಕರಾವಳಿಗೆ ಬಿರುಗಾಳಿ ಸಾಧ್ಯತೆ
ಇದೇ ವೇಳೆ, ಇಂಡಿಯನ್ ಕೋಸ್ಟ್ ಗಾರ್ಡ್ ಕಡೆಯಿಂದ ಅರಬ್ಬೀ ಸಮುದ್ರದಲ್ಲಿ ಭಾರೀ ಬಿರುಗಾಳಿ ಏಳುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಉತ್ತರದ ಗೋವಾ, ಕಾರವಾರ, ಉಡುಪಿಯ ಮಲ್ಪೆ, ಮಂಗಳೂರಿನ ಮೂಲ್ಕಿ, ಪಣಂಬೂರು ಭಾಗದಲ್ಲಿ ಬಿರುಗಾಳಿಯ ಪರಿಣಾಮ ನಾಲ್ಕರಿಂದ 5 ಮೀಟರ್ ಎತ್ತರಕ್ಕೆ ಸಮುದ್ರದ ಅಲೆಗಳು ತೀರಕ್ಕೆ ಅಪ್ಪಳಿಸಲಿದೆ. ಇದಲ್ಲದೆ, ಗಂಟೆಗೆ 55-70 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ತೀರದಲ್ಲಿ ಪ್ರವಾಹ ಸ್ಥಿತಿ ತಲೆದೋರಲಿದೆ. ತೀರದ ನಿವಾಸಿಗಳು ಜಾಗ್ರತೆಯಲ್ಲಿರಬೇಕು ಎಂದು ಸೂಚಿಸಲಾಗಿದೆ.
ಭಾರೀ ಮಳೆಗೆ ನದಿಗಳ ಆಸುಪಾಸಿನಲ್ಲಿ ನೆರೆ
ಶುಕ್ರವಾರ ಇಡೀ ದಿನ ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಮಳೆ ಹೆಚ್ಚಿದ್ದರಿಂದ ನದಿಗಳಲ್ಲಿ ನೀರು ಭೋರ್ಗರೆಯುತ್ತ ಬಂದಿದ್ದು, ಫಲ್ಗುಣಿ, ನೇತ್ರಾವತಿ ನದಿಗಳಲ್ಲಿ ನೆರೆ ಕಾಣಿಸಿಕೊಂಡಿದೆ. ಫಲ್ಗುಣಿ ನದಿಯಲ್ಲಿ ನೆರೆ ಕಾಣಿಸಿಕೊಂಡಿದ್ದರಿಂದ ಅದ್ಯಪಾಡಿ ಪರಿಸರದಲ್ಲಿ ಕೃಷಿ ಭೂಮಿ ಮತ್ತು 35 ಮನೆಗಳು ನೀರಿನಲ್ಲಿ ಮುಳುಗಡೆಯಾಗಿವೆ. ಬಂಟ್ವಾಳ ತಾಲೂಕಿನ ಆಲಡ್ಕ, ಅಜಿಲಮೊಗರು, ನಂದಾವರ ಭಾಗದಲ್ಲಿ ನೆರೆ ನೀರು ನುಗ್ಗಿದ್ದು 12 ಮನೆಗಳ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ.
Mangalore heavy rains, schools and colleges declared holiday on July 20, red alert issued. Due to high rainfall in the twin districts a holiday has been declared in Dakshina Kannada and Udupi districts for schools and pre-university colleges on Saturday, July 20.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm