ಬ್ರೇಕಿಂಗ್ ನ್ಯೂಸ್
19-07-24 10:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರಿಗೆ ಸೇರಿದ ಆರು ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಅಕ್ರಮ ಆಸ್ತಿಯ ಬಗ್ಗೆ ಪರಿಶೀಲನೆ ನಡೆಸಿದೆ. ಈ ವೇಳೆ, ಮೂರು ವಾಸದ ಮನೆಗಳು ಸೇರಿದಂತೆ ಚಿನ್ನಾಭರಣ, ಜಮೀನು ಮಾಡಿಕೊಂಡಿರುವುದು ಪತ್ತೆಯಾಗಿದೆ.
ಮೈಸೂರು, ಬೆಂಗಳೂರು ಸೇರಿದಂತೆ ಮೂರು ಮನೆಗಳಿವೆ. ಇದಲ್ಲದೆ, ನಾಲ್ಕು ಎಕರೆ 27 ಗುಂಟೆ ಕೃಷಿ ಜಮೀನು ಹೊಂದಿದ್ದಾರೆ. ಇದರ ಆಸ್ತಿ ಮೌಲ್ಯ 2.12 ಕೋಟಿ ಆಗಿರುತ್ತದೆ. 19.40 ಲಕ್ಷ ಮೌಲ್ಯದ ಚಿನ್ನಾಭರಣಗಳು, 20.50 ಲಕ್ಷ ಮೌಲ್ಯದ ವಾಹನಗಳು, ಜಮೀನು ಖರೀದಿಸಲು 10 ಲಕ್ಷ ಮುಂಗಡ ಹಣ ನೀಡಿರುವುದು, ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ 16 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಇರುವುದು ಪತ್ತೆಯಾಗಿದೆ. ಆನಂದ್ ಸಿ.ಎಲ್. ಅವರ ಒಟ್ಟು ಆಸ್ತಿ ಮೌಲ್ಯ 2.77 ಕೋಟಿ ಆಗಿರುತ್ತದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ರಾಜ್ಯದಾದ್ಯಂತ 12 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನ ಪಾಲಿಕೆ ಕಮಿಷನರ್ ಆನಂದ್ ಅವರ ಮಣ್ಣಗುಡ್ಡೆಯ ಬಂಗಲೆ, ಪಾಲಿಕೆಯ ಕಚೇರಿ, ಮೈಸೂರು, ಬೆಂಗಳೂರಿನ ಮನೆ, ಮಂಡ್ಯದ ಮನೆಗಳಿಗೆ ದಾಳಿ ನಡೆದಿತ್ತು. ಇವರು ಈ ಹಿಂದೆ ಬಿಡಿಎ ಅಧಿಕಾರಿಯಾಗಿದ್ದಾಗ ಅಕ್ರಮ ಆಸ್ತಿ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Mangalore mcc Commissioner C L Anand raid by Lokayukta, 2.77 crore assets found. Mangaluru city Municipal Commissioner C L Anand was among the 13 government officials raided by Lokayukta sleuths in Karnataka on Friday, in connection with disproportionate assets cases.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm