ಬ್ರೇಕಿಂಗ್ ನ್ಯೂಸ್
19-07-24 10:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರಿಗೆ ಸೇರಿದ ಆರು ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಅಕ್ರಮ ಆಸ್ತಿಯ ಬಗ್ಗೆ ಪರಿಶೀಲನೆ ನಡೆಸಿದೆ. ಈ ವೇಳೆ, ಮೂರು ವಾಸದ ಮನೆಗಳು ಸೇರಿದಂತೆ ಚಿನ್ನಾಭರಣ, ಜಮೀನು ಮಾಡಿಕೊಂಡಿರುವುದು ಪತ್ತೆಯಾಗಿದೆ.
ಮೈಸೂರು, ಬೆಂಗಳೂರು ಸೇರಿದಂತೆ ಮೂರು ಮನೆಗಳಿವೆ. ಇದಲ್ಲದೆ, ನಾಲ್ಕು ಎಕರೆ 27 ಗುಂಟೆ ಕೃಷಿ ಜಮೀನು ಹೊಂದಿದ್ದಾರೆ. ಇದರ ಆಸ್ತಿ ಮೌಲ್ಯ 2.12 ಕೋಟಿ ಆಗಿರುತ್ತದೆ. 19.40 ಲಕ್ಷ ಮೌಲ್ಯದ ಚಿನ್ನಾಭರಣಗಳು, 20.50 ಲಕ್ಷ ಮೌಲ್ಯದ ವಾಹನಗಳು, ಜಮೀನು ಖರೀದಿಸಲು 10 ಲಕ್ಷ ಮುಂಗಡ ಹಣ ನೀಡಿರುವುದು, ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ 16 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಇರುವುದು ಪತ್ತೆಯಾಗಿದೆ. ಆನಂದ್ ಸಿ.ಎಲ್. ಅವರ ಒಟ್ಟು ಆಸ್ತಿ ಮೌಲ್ಯ 2.77 ಕೋಟಿ ಆಗಿರುತ್ತದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ರಾಜ್ಯದಾದ್ಯಂತ 12 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನ ಪಾಲಿಕೆ ಕಮಿಷನರ್ ಆನಂದ್ ಅವರ ಮಣ್ಣಗುಡ್ಡೆಯ ಬಂಗಲೆ, ಪಾಲಿಕೆಯ ಕಚೇರಿ, ಮೈಸೂರು, ಬೆಂಗಳೂರಿನ ಮನೆ, ಮಂಡ್ಯದ ಮನೆಗಳಿಗೆ ದಾಳಿ ನಡೆದಿತ್ತು. ಇವರು ಈ ಹಿಂದೆ ಬಿಡಿಎ ಅಧಿಕಾರಿಯಾಗಿದ್ದಾಗ ಅಕ್ರಮ ಆಸ್ತಿ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Mangalore mcc Commissioner C L Anand raid by Lokayukta, 2.77 crore assets found. Mangaluru city Municipal Commissioner C L Anand was among the 13 government officials raided by Lokayukta sleuths in Karnataka on Friday, in connection with disproportionate assets cases.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm