ಬ್ರೇಕಿಂಗ್ ನ್ಯೂಸ್
20-07-24 03:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 20: ಕರಾವಳಿಯಲ್ಲಿ ಮಳೆ ತೀವ್ರತೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಶಿರಾಡಿ ಘಾಟ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಹಗಲಿನ ವೇಳೆಯಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಮಾರ್ಪಡಿಸಿದ್ದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ವಾಹನಗಳಿಗೆ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ. ರಾತ್ರಿ ವೇಳೆ ತುರ್ತು ಸಂಚಾರದ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಇದೆ.
ಎರಡು ದಿನಗಳ ಹಿಂದೆ ಭಾರೀ ಭೂಕುಸಿತ ಆಗಿದ್ದರಿಂದ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು. ಇದರಿಂದಾಗಿ ಮಂಗಳೂರು- ಬೆಂಗಳೂರು ಸಂಚಾರಕ್ಕೆ ದೊಡ್ಡ ಬ್ರೇಕ್ ಬಿದ್ದಿತ್ತು. ಅತ್ತ ಸಂಪಾಜೆ ಹೆದ್ದಾರಿಯೂ ರಾತ್ರಿ ವೇಳೆ ಬಂದ್ ಆಗಿದ್ದರಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಮಾತ್ರ ವಾಹನಗಳು ಸಂಚರಿಸಬೇಕಿತ್ತು. ಬೆಂಗಳೂರು ಕಡೆಯಿಂದ ಬಂದ ವಾಹನಗಳು ಸಕಲೇಶಪುರ ವರೆಗೆ ಬಂದು ಹೆದ್ದಾರಿ ಬಂದ್ ಆಗಿದ್ದರಿಂದ ತೊಂದರೆಗೀಡಾಗಿದ್ದರು. ಇದೀಗ ಸಕಲೇಶಪುರ ವಿಭಾಗಾಧಿಕಾರಿ ಹಗಲಿನ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಬಹುದೆಂದು ವರದಿ ನೀಡಿದ್ದಾರೆ. ಅಲ್ಲದೆ, ಕುಸಿದಿರುವ ಮಣ್ಣನ್ನು ಹೆದ್ದಾರಿಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ.
The Hassan district administration, which prohibited the movement of vehicles on Shiradi Ghat stretch of NH-75, has revised the order and allowed the movement of vehicles during the day.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm