ಬ್ರೇಕಿಂಗ್ ನ್ಯೂಸ್
22-07-24 05:30 pm Mangalore Correspondent ಕರಾವಳಿ
ಮಂಗಳೂರು, ಜುಲೈ.22: ಸರಕಾರಿ ಶಾಲೆಗಳ ಆವರಣದಲ್ಲಿ ಅಥವಾ ಶಾಲಾ ಮೈದಾನದಲ್ಲಿ ಗಣೇಶೋತ್ಸವ ಇನ್ನಿತರ ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಸುತ್ತೋಲೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ತುಷ್ಟೀಕರಣ ನೀತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನಗರದ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನಸೌಧ ಎದುರಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶನ ವಿಗ್ರಹ ಮುಂದಿಟ್ಟು ಒಂದು ಗಂಟೆ ಕಾಲ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಕಾಂಗ್ರೆಸಿನಲ್ಲಿರುವ ಹಿಂದುಗಳು ಕೂಡ ಶಾಲೆಯ ಆವರಣದಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಸುತ್ತಿದ್ದರು. ಶಾಲಾ ಮೈದಾನದಲ್ಲಿ ಎಲ್ಲ ಮಕ್ಕಳೂ ಜೊತೆಯಾಗಿ ಉತ್ಸವದಲ್ಲಿ ಕಳೆಯುತ್ತಿದ್ದರು. ಆದರೆ, ಕಾಂಗ್ರೆಸಿನ ಹಿಂದುಗಳು ಸರಕಾರದ ನೀತಿಯನ್ನು ಖಂಡಿಸಲಾಗದ ಸ್ಥಿತಿಯಲ್ಲಿದ್ದಾರೆ. ಹಿಂದುಗಳು ಜಾಗೃತರಾಗಬಾರದು, ಜೊತೆಗೂಡಬಾರದು ಎನ್ನುವ ಹುನ್ನಾರದಿಂದ ಈ ರೀತಿಯ ಕೆಲಸ ಮಾಡಿದ್ದಾರೆ.


ಸ್ವಾತಂತ್ರ್ಯ ಕಾಲದಲ್ಲಿ ಜನರನ್ನು ಒಗ್ಗೂಡಿಸುವುದಕ್ಕಾಗಿ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಗಳನ್ನು ಆಚರಣೆಗೆ ತಂದಿದ್ದರು. ಪ್ರತಿ ವರ್ಷ ಕರಾವಳಿ ಸೇರಿದಂತೆ ನಾಡಿನೆಲ್ಲೆಡೆ ಗಣೇಶೋತ್ಸವ ನಡೆಯುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹಳಷ್ಟು ಕಡೆ ಶಾಲಾ ಮೈದಾನದಲ್ಲಿ ಹಬ್ಬ ನಡೆಸಲಾಗುತ್ತದೆ. ಆದರೆ, ಈ ಬಾರಿ ಜಿಲ್ಲಾ ಶಿಕ್ಷಣಾಧಿಕಾರಿಗಳು ಎಲ್ಲ ಶಾಲೆಗಳ ಮುಖ್ಯಸ್ಥರಿಗೆ ಪತ್ರ ಬರೆದು ಶಿಕ್ಷಣೇತರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸೂಚಿಸಿದ್ದಾರೆ. ಆಮೂಲಕ ಹಿಂದುಗಳ ಹಬ್ಬ ಗಣೇಶೋತ್ಸವ ಇನ್ನಿತರ ಉತ್ಸವಗಳಿಗೆ ಆಸ್ಪದ ಸಿಗದಂತೆ ಮಾಡಿದ್ದಾರೆ. ಇದರ ಹಿಂದೆ ಸರ್ಕಾರದ ಹಿಂದು ವಿರೋಧಿ ನೀತಿ ಇದೆಯೆಂದು ಸತೀಶ್ ಕುಂಪಲ ಆರೋಪಿಸಿದರು.
ಪ್ರತಿಭಟನೆಯಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮೇಯರ್ ಸುಧೀರ್ ಶೆಟ್ಟಿ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಮಾತನಾಡಿದರು. ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ರವಿಶಂಕರ ಮಿಜಾರ್, ಕಿಶೋರ್ ಕುಮಾರ್, ಮಹಿಳಾ ಮೋರ್ಚಾ ಪ್ರಮುಖರು ಮತ್ತಿತರರಿದ್ದರು.
Denial of Ganeshotsava in school grounds by Congress government, BJP protest by Satish Kumpala in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm