Mangalore, DYFI, Mcc, C L Anand: ಲೋಕಾಯುಕ್ತ ದಾಳಿ ; ಪಾಲಿಕೆ ಕಮಿಷನರ್ ವಜಾಕ್ಕೆ ಡಿವೈಎಫ್ಐ ಕಾರ್ಯಕರ್ತರ ಪ್ರತಿಭಟನೆ, ರಸ್ತೆ ತಡೆಗೆ ಯತ್ನಿಸಿದ ಕಾರ್ಯಕರ್ತರು ಪೊಲೀಸ್ ವಶಕ್ಕೆ

23-07-24 01:02 pm       Mangalore Correspondent   ಕರಾವಳಿ

ಇತ್ತೀಚೆಗೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ ಡಿವೈಎಫ್ಐ ಮತ್ತು ಎಡಪಕ್ಷಗಳ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ.

ಮಂಗಳೂರು, ಜುಲೈ.23: ಇತ್ತೀಚೆಗೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ ಡಿವೈಎಫ್ಐ ಮತ್ತು ಎಡಪಕ್ಷಗಳ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ತಡೆದು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. 

ಇತ್ತೀಚೆಗೆ ಲೋಕಾಯುಕ್ತ ಬೆಂಗಳೂರು ವಿಭಾಗದ ಅಧಿಕಾರಿಗಳು ಮಂಗಳೂರಿನ ಪಾಲಿಕೆ ಕಮಿಷನರ್ ಮನೆ, ಕಚೇರಿಗೆ ದಾಳಿ ನಡೆಸಿದ್ದರು. ಬೆಂಗಳೂರು, ಮೈಸೂರಿನಲ್ಲಿ ಮನೆ, ಜಮೀನು ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಕಮಿಷನರ್ ಆನಂದ್ ಸಿ.ಎಲ್ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಕಾರ್ಯಕರ್ತರು ಪಾಲಿಕೆ ಮುಂದೆ ಪ್ರತಿಭಟಿಸಿ, ಮುತ್ತಿಗೆ ಹಾಕಲು ಯತ್ನಿಸಿದಾಗ ಕಾರ್ಯಕರ್ತರನ್ನು ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‌ಪೊಲೀಸ್ ಬಸ್ಸಿನಲ್ಲಿಯೂ ಪ್ರತಿಭಟನೆ ಮುಂದುವರಿಸಿ ಘೋಷಣೆ ಕೂಗಿದ್ದರು. 

ಡಿವೈಎಫ್ಐ ಮುಖಂಡರಾದ ಬಿಕೆ ಇಮ್ತಿಯಾಜ್, ಸಂತೋಷ್ ಬಜಾಲ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‌ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತವೇ ಭ್ರಷ್ಟಾಚಾರ ನಡೆಸುತ್ತಿದ್ದು ಇದಕ್ಕೆ ಪಾಲಿಕೆ ಕಮಿಷನರ್ ಸಾಥ್ ನೀಡುತ್ತಿದ್ದಾರೆ. ಇಂಥ ಆಯುಕ್ತರನ್ನು ಕರ್ತವ್ಯದಲ್ಲಿ ಉಳಿಸಿಕೊಂಡಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

Dyfi members gherao Mangalore city corporation over suspension of commissioner C L Anand after the lokayukta raided his office and house in Mangalore.