ಬ್ರೇಕಿಂಗ್ ನ್ಯೂಸ್
07-12-20 06:42 pm Mangalore Correspondent ಕರಾವಳಿ
ಮಂಗಳೂರು, ಡಿ.7: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಪಂಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಕೊರೊನಾ ಕಾರಣದಿಂದ ಇವಿಎಂ ಬದಲಿಗೆ ಮತಪತ್ರಗಳಿಂದಲೇ ಮತದಾನ ನಡೆಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯ 7 ತಾಲೂಕುಗಳಲ್ಲಿ 1527 ಮತಗಟ್ಟೆಗಳನ್ನು ತೆರೆಯಲಾಗುವುದು. ಆ ಪೈಕಿ 397 ಸೂಕ್ಷ್ಮ ಮತ್ತು 198 ಅತಿ ಸೂಕ್ಷ್ಮ ಹಾಗೂ 931 ಸಾಮಾನ್ಯ ಮತಗಟ್ಟೆಗಳಿವೆ. ಅಲ್ಲದೆ 2626 ಮತಪೆಟ್ಟಿಗೆಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಇದ್ದಾರೆ. ಚುನಾವಣೆ ಕರ್ತವ್ಯಕ್ಕೆ, 220 ಚುನಾವಣಾ ಅಧಿಕಾರಿ ಮತ್ತು 233 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯುಕ್ತಿ ಮಾಡಲಾಗುವುದು ಎಂದು ಅವರು ಹೇಳಿದರು.
ಮತಪತ್ರಗಳ ಮುದ್ರಣಕ್ಕೆ ಸಂಬಂಧಿಸಿ ಸಹಾಯಕ ಆಯುಕ್ತರು ಮತ್ತು ಆಯಾ ತಹಸೀಲ್ದಾರರಿಗೆ ಜವಾಬ್ದಾರಿ ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಪಾಡಲು ಕ್ರಮ ವಹಿಸಲಾಗುವುದು, ಇದಕ್ಕಾಗಿ ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಎಡಿಸಿ ರೂಪಾ ಉಪಸ್ಥಿತರಿದ್ದರು.
As many as 10,39,217 voters will be voting in the gram panchayat elections in the district, informed deputy commissioner (DC) Dr K V Rajendra.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm