ಬ್ರೇಕಿಂಗ್ ನ್ಯೂಸ್
07-12-20 06:42 pm Mangalore Correspondent ಕರಾವಳಿ
ಮಂಗಳೂರು, ಡಿ.7: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಪಂಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಕೊರೊನಾ ಕಾರಣದಿಂದ ಇವಿಎಂ ಬದಲಿಗೆ ಮತಪತ್ರಗಳಿಂದಲೇ ಮತದಾನ ನಡೆಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯ 7 ತಾಲೂಕುಗಳಲ್ಲಿ 1527 ಮತಗಟ್ಟೆಗಳನ್ನು ತೆರೆಯಲಾಗುವುದು. ಆ ಪೈಕಿ 397 ಸೂಕ್ಷ್ಮ ಮತ್ತು 198 ಅತಿ ಸೂಕ್ಷ್ಮ ಹಾಗೂ 931 ಸಾಮಾನ್ಯ ಮತಗಟ್ಟೆಗಳಿವೆ. ಅಲ್ಲದೆ 2626 ಮತಪೆಟ್ಟಿಗೆಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಇದ್ದಾರೆ. ಚುನಾವಣೆ ಕರ್ತವ್ಯಕ್ಕೆ, 220 ಚುನಾವಣಾ ಅಧಿಕಾರಿ ಮತ್ತು 233 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯುಕ್ತಿ ಮಾಡಲಾಗುವುದು ಎಂದು ಅವರು ಹೇಳಿದರು.

ಮತಪತ್ರಗಳ ಮುದ್ರಣಕ್ಕೆ ಸಂಬಂಧಿಸಿ ಸಹಾಯಕ ಆಯುಕ್ತರು ಮತ್ತು ಆಯಾ ತಹಸೀಲ್ದಾರರಿಗೆ ಜವಾಬ್ದಾರಿ ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಪಾಡಲು ಕ್ರಮ ವಹಿಸಲಾಗುವುದು, ಇದಕ್ಕಾಗಿ ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಎಡಿಸಿ ರೂಪಾ ಉಪಸ್ಥಿತರಿದ್ದರು.
As many as 10,39,217 voters will be voting in the gram panchayat elections in the district, informed deputy commissioner (DC) Dr K V Rajendra.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm