ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.

ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm