ಬ್ರೇಕಿಂಗ್ ನ್ಯೂಸ್
24-07-24 09:01 pm HK News Desk ಕರಾವಳಿ
ಮಂಗಳೂರು, ಜುಲೈ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಣ್ಣು ಕುಕ್ಕುವ ರೀತಿಯ ದೀಪಗಳನ್ನು ಅಳವಡಿಸಿದ ವಾಹನಗಳ ವಿರುದ್ಧ ಪೊಲೀಸರು ಜೂನ್ 15 ರಿಂದ ದಂಡ ವಿಧಿಸುವ ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೆ 1170 ಪ್ರಕರಣಗಳನ್ನು ದಾಖಲಿಸಿ 5,86,500 ರೂ. ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೆ ವಿಶೇಷ ಸೂಚನೆ
ಸಾರ್ವಜನಿಕರು ತಮ್ಮ ಮೋಟಾರು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆ-1989 ರಲ್ಲಿ ಸೂಚಿಸಿರುವಂತೆ ವಿವಿಧ ಮಾದರಿಯ ವಾಹನಗಳಿಗೆ ಸದರಿ ವಾಹನ ಕಂಪೆನಿಯವರು ನಿಗದಿ ಪಡಿಸಿದ ಹೆಡ್ ಲೈಟ್ ಗಳನ್ನು ಮಾತ್ರ ಅಳವಡಿಸಬೇಕಾಗಿರುತ್ತದೆ.
ಹೆಚ್ಚುವರಿಯಾಗಿ ಅಲಂಕಾರಿಕ ದೀಪಗಳನ್ನು ಹಾಗೂ ಪ್ರಖರ ಬೆಳಕು ಸೂಸುವ ಮತ್ತು ಕಣ್ಣಿಗೆ ಕುಕ್ಕುವ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸುವಂತಿಲ್ಲ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಬೀದಿದೀಪಗಳು ಇರುವೆಡೆ ಯಾವುದೇ ಕಾರಣಕ್ಕೂ ಹೈಬೀಮ್ ಬೆಳಕಿನೊಂದಿಗೆ ವಾಹನಗಳನ್ನು ಚಲಾಯಿಸುವಂತಿಲ್ಲ.
ಮೋಟಾರು ಸೈಕಲ್ ಹಾಗೂ ಆಟೋರಿಕ್ಷಾಗಳು 1 ಅಥವಾ 2 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು. ನಾಲ್ಕು ಚಕ್ರ ಮತ್ತು ಹೆಚ್ಚಿನ ಚಕ್ರದ ವಾಹನಗಳು 2 ಅಥವಾ 4 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು.
ವಾಹನಗಳ ಹೆಡ್ ಲೈಟ್ ಗಳಿಂದ ಹೊರಹೊಮ್ಮವ ಬೆಳಕು ಶಾಶ್ವತವಾಗಿ ಕೆಳ ಮುಖವಾಗಿ ಸದರಿ ಹೆಡ್ ಲೈಟ್ ನಿಂದ 8 ಮೀಟರ್ ದೂರದಲ್ಲಿನ ವಾಹನದಲ್ಲಿ ಕುಳಿತಿರುವ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ. ಹಾಗೆಯೇ ಸದರಿ ವಾಹನದ ಬಲಭಾಗದಲ್ಲಿ ಅಳವಡಿಸಿರುವ ಹೆಡ್ ಲೈಟ್ ನಿಂದ ಬಲಕ್ಕೆ 0.5 ಮೀ ದೂರದಲ್ಲಿ ಕುಳಿತಿರುವ ಎದುರಿನ ವಾಹನದಲ್ಲಿನ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
High beam light, Mangalore police collect fine of rs 5.87 lakhs. Police have fined almost 1170 vehicles so far.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm