ಬ್ರೇಕಿಂಗ್ ನ್ಯೂಸ್
24-07-24 09:01 pm HK News Desk ಕರಾವಳಿ
ಮಂಗಳೂರು, ಜುಲೈ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಣ್ಣು ಕುಕ್ಕುವ ರೀತಿಯ ದೀಪಗಳನ್ನು ಅಳವಡಿಸಿದ ವಾಹನಗಳ ವಿರುದ್ಧ ಪೊಲೀಸರು ಜೂನ್ 15 ರಿಂದ ದಂಡ ವಿಧಿಸುವ ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೆ 1170 ಪ್ರಕರಣಗಳನ್ನು ದಾಖಲಿಸಿ 5,86,500 ರೂ. ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೆ ವಿಶೇಷ ಸೂಚನೆ
ಸಾರ್ವಜನಿಕರು ತಮ್ಮ ಮೋಟಾರು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆ-1989 ರಲ್ಲಿ ಸೂಚಿಸಿರುವಂತೆ ವಿವಿಧ ಮಾದರಿಯ ವಾಹನಗಳಿಗೆ ಸದರಿ ವಾಹನ ಕಂಪೆನಿಯವರು ನಿಗದಿ ಪಡಿಸಿದ ಹೆಡ್ ಲೈಟ್ ಗಳನ್ನು ಮಾತ್ರ ಅಳವಡಿಸಬೇಕಾಗಿರುತ್ತದೆ.
ಹೆಚ್ಚುವರಿಯಾಗಿ ಅಲಂಕಾರಿಕ ದೀಪಗಳನ್ನು ಹಾಗೂ ಪ್ರಖರ ಬೆಳಕು ಸೂಸುವ ಮತ್ತು ಕಣ್ಣಿಗೆ ಕುಕ್ಕುವ ಎಲ್.ಇ.ಡಿ ಬಲ್ಬ್ ಗಳನ್ನು ಅಳವಡಿಸುವಂತಿಲ್ಲ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಬೀದಿದೀಪಗಳು ಇರುವೆಡೆ ಯಾವುದೇ ಕಾರಣಕ್ಕೂ ಹೈಬೀಮ್ ಬೆಳಕಿನೊಂದಿಗೆ ವಾಹನಗಳನ್ನು ಚಲಾಯಿಸುವಂತಿಲ್ಲ.
ಮೋಟಾರು ಸೈಕಲ್ ಹಾಗೂ ಆಟೋರಿಕ್ಷಾಗಳು 1 ಅಥವಾ 2 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು. ನಾಲ್ಕು ಚಕ್ರ ಮತ್ತು ಹೆಚ್ಚಿನ ಚಕ್ರದ ವಾಹನಗಳು 2 ಅಥವಾ 4 ಹೆಡ್ ಲೈಟ್ ಗಳನ್ನು ಮಾತ್ರ ಹೊಂದುವುದು.
ವಾಹನಗಳ ಹೆಡ್ ಲೈಟ್ ಗಳಿಂದ ಹೊರಹೊಮ್ಮವ ಬೆಳಕು ಶಾಶ್ವತವಾಗಿ ಕೆಳ ಮುಖವಾಗಿ ಸದರಿ ಹೆಡ್ ಲೈಟ್ ನಿಂದ 8 ಮೀಟರ್ ದೂರದಲ್ಲಿನ ವಾಹನದಲ್ಲಿ ಕುಳಿತಿರುವ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ. ಹಾಗೆಯೇ ಸದರಿ ವಾಹನದ ಬಲಭಾಗದಲ್ಲಿ ಅಳವಡಿಸಿರುವ ಹೆಡ್ ಲೈಟ್ ನಿಂದ ಬಲಕ್ಕೆ 0.5 ಮೀ ದೂರದಲ್ಲಿ ಕುಳಿತಿರುವ ಎದುರಿನ ವಾಹನದಲ್ಲಿನ ವ್ಯಕ್ತಿಯ ಕಣ್ಣಿಗೆ ಪ್ರಖರವಾಗಿರತಕ್ಕದ್ದಲ್ಲ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
High beam light, Mangalore police collect fine of rs 5.87 lakhs. Police have fined almost 1170 vehicles so far.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm