ಬ್ರೇಕಿಂಗ್ ನ್ಯೂಸ್
25-07-24 11:19 pm Mangalore Correspondent ಕರಾವಳಿ
ಉಳ್ಳಾಲ, ಜು.25: ಮದನಿ ನಗರದ ಮಾದರಿಯಲ್ಲೇ ಉಳ್ಳಾಲದಲ್ಲೂ ಮನೆ ಕುಸಿತ ಉಂಟಾಗಿದ್ದು, ಮನೆ ಛಾವಣಿ ಮೇಲೆ ಪಕ್ಕದ ಮನೆಯ ಎತ್ತರದ ಶಿಥಿಲಗೊಂಡ ಗೋಡೆಯ ಕಲ್ಲುಗಳು ಕುಸಿದು ಬಿದ್ದಿದೆ. ಮನೆಯೊಳಗಿದ್ದ ಗೃಹಿಣಿ ಮತ್ತು ಇಬ್ಬರು ಮಕ್ಕಳು ಪವಾಡ ಸದೃಶ ಪಾರಾಗಿದ್ದಾರೆ.
ಧಾರಾಕಾರ ಸುರಿಯುತ್ತಿರುವ ಮಳೆಗೆ ಮನೆಯ ಹಂಚಿನ ಛಾವಣಿ ಮೇಲೆ ಪಕ್ಕದ ಮನೆಯ ಗೋಡೆಯ ಕಲ್ಲುಗಳು ಕುಸಿದು ಬಿದ್ದ ಘಟನೆ ಉಳ್ಳಾಲ ಕೋಟೆಪುರದ ಕೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮುಸ್ತಫಾ ಎಂಬವರ ಮಾಲಿಕತ್ವದ ಬಾಡಿಗೆ ಮನೆಯಲ್ಲಿ ಅನಾಹುತ ಸಂಭವಿಸಿದೆ. ಝಾಕಿರ್ ಎಂಬವರ ಕುಟುಂಬ ವಾಸವಿದ್ದು ಧಾರಾಕಾರ ಮಳೆಗೆ ಮನೆಯ ಹಂಚಿನ ಮೇಲೆ ಪಕ್ಕದ ಶಿಥಿಲ ಮನೆಯ ಎತ್ತರದ ಗೋಡೆ ಕುಸಿದು ಬಿದ್ದಿದೆ. ಗೋಡೆಯ ಒದ್ದೆಯಾದ ಬೃಹತ್ ಗಾತ್ರದ ಕೆಂಪು ಕಲ್ಲುಗಳು ಝಾಕಿರ್ ವಾಸವಿದ್ದ ಮನೆಯ ಹಾಲಿನ ಸೋಫದ ಮೇಲೆ ಬಿದ್ದಿವೆ. ಮನೆಯೊಳಗಡೆ ಝಾಕಿರ್ ಅವರ ಪತ್ನಿ ಇದ್ದು ಇಬ್ಬರು ಪುಟ್ಟ ಮಕ್ಕಳು ಸೋಫಾದಲ್ಲೇ ಆಟವಾಡುತ್ತಿದ್ದರು. ಈ ವೇಳೆ ನೆರೆ ಮನೆಯವರು ಬಂದು ಬಾಗಿಲು ತಟ್ಟಿದ್ದಾರೆ. ಝಾಕಿರ್ ಪತ್ನಿ ಬಾಗಿಲು ತೆರೆಯಲು ಹೋದಾಗ ಮಕ್ಕಳಿಬ್ಬರು ತಾಯಿ ಜೊತೆ ಬಂದಿದ್ದರಿಂದ ಬಚಾವಾಗಿದ್ದಾರೆ.
ಮುಸ್ತಫಾ ಅವರ ಆವರಣ ಗೋಡೆಯ ಒಳಗಡೆ ಮೂರು ಬಾಡಿಗೆ ಮನೆ, ಮತ್ತೊಂಡು ಅಂಗಡಿ ಇದೆ. ಮೂರು ಮನೆಗಳ ಕುಟಂಬಸ್ಥರು ಬೇರೆಡೆ ಸ್ಥಳಾಂತರಗೊಂಡಿದ್ದಾರೆ.
ಸಚಿವರ ಆದೇಶಕ್ಕೆ ಕಿಮ್ಮತ್ತು ಕೊಡದ ನಗರಸಭೆ
ಕುತ್ತಾರಿನ ಮದನಿನಗರದಲ್ಲಿ ಕಳೆದ ತಿಂಗಳಲ್ಲಿ ಆವರಣ ಗೋಡೆ ಮನೆ ಮೇಲೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಳೆಗಾಲದಲ್ಲಿ ಅಪಾಯದಲ್ಲಿರುವ ಮನೆಗಳನ್ನು ಗುರುತಿಸಿ ಮನೆಮಂದಿಯನ್ನ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಆದರೆ ಸಚಿವರ ಮಾತಿಗೆ ಉಳ್ಳಾಲ ನಗರಸಭೆ ಕಿಮ್ಮತ್ತು ಕೊಟ್ಟಿಲ್ಲ. ನಗರಸಭೆ ವತಿಯಿಂದ ಅಪಾಯ ಎದುರಿಸುವ ಕುಟುಂಬಗಳಿಗೆ ಒಂಭತ್ತುಕೆರೆ ಸರಕಾರಿ ಶಾಲೆಯ ಮೇಲ್ಮಹಡಿಯ ಸಭಾಂಗಣವನ್ನ ಪರ್ಯಾಯ ವ್ಯವಸ್ಥೆಯಾಗಿ ಮೀಸಲಿಟ್ಟಿದ್ದಾರೆ. ಆದರೆ ಮೂಲ ಸೌಕರ್ಯಗಳೇ ಇಲ್ಲದೆ ತೆರೆದ ಸಭಾಂಗಣದಲ್ಲಿ ಯಾರೊಬ್ಬರು ಉಳಿದುಕೊಳ್ಳಲು ಸಿದ್ಧರಿಲ್ಲದೆ ಅಪಾಯಕಾರಿ ಮನೆಗಳಲ್ಲೇ ವಾಸಿಸುತ್ತಿದ್ದಾರೆ.
Heavy rain in Mangalore, Ullal house wall collapses, family escapes from death.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm