ಬ್ರೇಕಿಂಗ್ ನ್ಯೂಸ್
25-07-24 11:19 pm Mangalore Correspondent ಕರಾವಳಿ
ಉಳ್ಳಾಲ, ಜು.25: ಮದನಿ ನಗರದ ಮಾದರಿಯಲ್ಲೇ ಉಳ್ಳಾಲದಲ್ಲೂ ಮನೆ ಕುಸಿತ ಉಂಟಾಗಿದ್ದು, ಮನೆ ಛಾವಣಿ ಮೇಲೆ ಪಕ್ಕದ ಮನೆಯ ಎತ್ತರದ ಶಿಥಿಲಗೊಂಡ ಗೋಡೆಯ ಕಲ್ಲುಗಳು ಕುಸಿದು ಬಿದ್ದಿದೆ. ಮನೆಯೊಳಗಿದ್ದ ಗೃಹಿಣಿ ಮತ್ತು ಇಬ್ಬರು ಮಕ್ಕಳು ಪವಾಡ ಸದೃಶ ಪಾರಾಗಿದ್ದಾರೆ.
ಧಾರಾಕಾರ ಸುರಿಯುತ್ತಿರುವ ಮಳೆಗೆ ಮನೆಯ ಹಂಚಿನ ಛಾವಣಿ ಮೇಲೆ ಪಕ್ಕದ ಮನೆಯ ಗೋಡೆಯ ಕಲ್ಲುಗಳು ಕುಸಿದು ಬಿದ್ದ ಘಟನೆ ಉಳ್ಳಾಲ ಕೋಟೆಪುರದ ಕೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮುಸ್ತಫಾ ಎಂಬವರ ಮಾಲಿಕತ್ವದ ಬಾಡಿಗೆ ಮನೆಯಲ್ಲಿ ಅನಾಹುತ ಸಂಭವಿಸಿದೆ. ಝಾಕಿರ್ ಎಂಬವರ ಕುಟುಂಬ ವಾಸವಿದ್ದು ಧಾರಾಕಾರ ಮಳೆಗೆ ಮನೆಯ ಹಂಚಿನ ಮೇಲೆ ಪಕ್ಕದ ಶಿಥಿಲ ಮನೆಯ ಎತ್ತರದ ಗೋಡೆ ಕುಸಿದು ಬಿದ್ದಿದೆ. ಗೋಡೆಯ ಒದ್ದೆಯಾದ ಬೃಹತ್ ಗಾತ್ರದ ಕೆಂಪು ಕಲ್ಲುಗಳು ಝಾಕಿರ್ ವಾಸವಿದ್ದ ಮನೆಯ ಹಾಲಿನ ಸೋಫದ ಮೇಲೆ ಬಿದ್ದಿವೆ. ಮನೆಯೊಳಗಡೆ ಝಾಕಿರ್ ಅವರ ಪತ್ನಿ ಇದ್ದು ಇಬ್ಬರು ಪುಟ್ಟ ಮಕ್ಕಳು ಸೋಫಾದಲ್ಲೇ ಆಟವಾಡುತ್ತಿದ್ದರು. ಈ ವೇಳೆ ನೆರೆ ಮನೆಯವರು ಬಂದು ಬಾಗಿಲು ತಟ್ಟಿದ್ದಾರೆ. ಝಾಕಿರ್ ಪತ್ನಿ ಬಾಗಿಲು ತೆರೆಯಲು ಹೋದಾಗ ಮಕ್ಕಳಿಬ್ಬರು ತಾಯಿ ಜೊತೆ ಬಂದಿದ್ದರಿಂದ ಬಚಾವಾಗಿದ್ದಾರೆ.
ಮುಸ್ತಫಾ ಅವರ ಆವರಣ ಗೋಡೆಯ ಒಳಗಡೆ ಮೂರು ಬಾಡಿಗೆ ಮನೆ, ಮತ್ತೊಂಡು ಅಂಗಡಿ ಇದೆ. ಮೂರು ಮನೆಗಳ ಕುಟಂಬಸ್ಥರು ಬೇರೆಡೆ ಸ್ಥಳಾಂತರಗೊಂಡಿದ್ದಾರೆ.
ಸಚಿವರ ಆದೇಶಕ್ಕೆ ಕಿಮ್ಮತ್ತು ಕೊಡದ ನಗರಸಭೆ
ಕುತ್ತಾರಿನ ಮದನಿನಗರದಲ್ಲಿ ಕಳೆದ ತಿಂಗಳಲ್ಲಿ ಆವರಣ ಗೋಡೆ ಮನೆ ಮೇಲೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಳೆಗಾಲದಲ್ಲಿ ಅಪಾಯದಲ್ಲಿರುವ ಮನೆಗಳನ್ನು ಗುರುತಿಸಿ ಮನೆಮಂದಿಯನ್ನ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಆದರೆ ಸಚಿವರ ಮಾತಿಗೆ ಉಳ್ಳಾಲ ನಗರಸಭೆ ಕಿಮ್ಮತ್ತು ಕೊಟ್ಟಿಲ್ಲ. ನಗರಸಭೆ ವತಿಯಿಂದ ಅಪಾಯ ಎದುರಿಸುವ ಕುಟುಂಬಗಳಿಗೆ ಒಂಭತ್ತುಕೆರೆ ಸರಕಾರಿ ಶಾಲೆಯ ಮೇಲ್ಮಹಡಿಯ ಸಭಾಂಗಣವನ್ನ ಪರ್ಯಾಯ ವ್ಯವಸ್ಥೆಯಾಗಿ ಮೀಸಲಿಟ್ಟಿದ್ದಾರೆ. ಆದರೆ ಮೂಲ ಸೌಕರ್ಯಗಳೇ ಇಲ್ಲದೆ ತೆರೆದ ಸಭಾಂಗಣದಲ್ಲಿ ಯಾರೊಬ್ಬರು ಉಳಿದುಕೊಳ್ಳಲು ಸಿದ್ಧರಿಲ್ಲದೆ ಅಪಾಯಕಾರಿ ಮನೆಗಳಲ್ಲೇ ವಾಸಿಸುತ್ತಿದ್ದಾರೆ.
Heavy rain in Mangalore, Ullal house wall collapses, family escapes from death.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm