ಬ್ರೇಕಿಂಗ್ ನ್ಯೂಸ್
27-07-24 02:09 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಸಕಲೇಶಪುರ ಬಳಿಯ ಎಡಕುಮೇರಿ- ಕಡಗರವಳ್ಳಿ ಮಧ್ಯೆ ರೈಲು ಹಳಿಗೆ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಈ ಹಾದಿಯಲ್ಲಿ ಸಾಗುವ ಜುಲೈ 29ರ ವರೆಗಿನ ಎಂಟು ರೈಲುಗಳನ್ನು ರದ್ದುಪಡಿಸಲಾಗಿದೆ. ಈ ಬಗ್ಗೆ ದಕ್ಷಿಣ ರೈಲ್ವೇಯ ಪಿಆರ್ ಓ ದೇವದಾನಂ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಜುಲೈ 27ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ವಿಜಯಪುರಕ್ಕೆ ತೆರಳಬೇಕಿದ್ದ ಸ್ಪೆಷಲ್ ಎಕ್ಸ್ ಪ್ರೆಸ್ ರೈಲನ್ನು (ಸಂಖ್ಯೆ 07378) ರದ್ದುಪಡಿಸಲಾಗಿದೆ. ಜುಲೈ 28ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಬೆಂಗಳೂರು ಯಶವಂತಪುರಕ್ಕೆ ತೆರಳಬೇಕಿದ್ದ ಪ್ಯಾಸೆಂಜರ್ ರೈಲು (ಸಂಖ್ಯೆ 16540) ರದ್ದಾಗಿದೆ. ರೈಲು ಸಂಖ್ಯೆ 07377 ವಿಜಯಪುರದಿಂದ ಮಂಗಳೂರು ಸೆಂಟ್ರಲ್ ನಿಲ್ದಾಣ ಮಧ್ಯೆ ಜುಲೈ 27ರಂದು ಓಡಾಟ ನಡೆಸಬೇಕಿದ್ದ ರೈಲನ್ನೂ ರದ್ದುಪಡಿಸಲಾಗಿದೆ.
ಜುಲೈ 28ರಂದು ಬೆಂಗಳೂರಿನಿಂದ ಕಾರವಾರಕ್ಕೆ ತೆರಳುವ ಸ್ಪೆಷಲ್ ಎಕ್ಸ್ ಪ್ರೆಸ್ (ಸಂಖ್ಯೆ 06567) ರೈಲನ್ನೂ ರದ್ದು ಮಾಡಲಾಗಿದೆ. ಜುಲೈ 27ರಂದು ಕಾರವಾರದಿಂದ ಬೆಂಗಳೂರು ತೆರಳಬೇಕಿದ್ದ 06568 ನಂಬರಿನ ರೈಲನ್ನೂ ರದ್ದುಪಡಿಸಲಾಗಿದೆ. ಜುಲೈ 27ರಂದು ಎಸ್ಎಂವಿಟಿ ಬೆಂಗಳೂರು- ಮುರುಡೇಶ್ವರ ಮಧ್ಯೆ ಓಡಾಟ ನಡೆಸಬೇಕಿದ್ದ ಎಕ್ಸ್ ಪ್ರೆಸ್ (ಸಂಖ್ಯೆ 16585) ರೈಲನ್ನು ರದ್ದು ಮಾಡಲಾಗಿದೆ. ಜುಲೈ 28ರಂದು ಮುರುಡೇಶ್ವರದಿಂದ ಬೆಂಗಳೂರು ತೆರಳಬೇಕಿದ್ದ 16586 ನಂಬರಿನ ರೈಲನ್ನೂ ರದ್ದು ಮಾಡಲಾಗಿದೆ. ಜುಲೈ 28ರಂದು ಯಶವಂತಪುರ- ಮಂಗಳೂರು ಜಂಕ್ಷನ್ ಮಧ್ಯೆ ಸಂಚರಿಸುವ (ಸಂಖ್ಯೆ 16575) ರೈಲನ್ನೂ ರದ್ದುಪಡಿಸಲಾಗಿದೆ. ಜುಲೈ 29ರಂದು ಸಂಚರಿಸುವ ಮಂಗಳೂರು ಜಂಕ್ಷನ್ – ಯಶವಂತಪುರ ಜಂಕ್ಷನ್ ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Karwar-Mangaluru and Bengaluru were affected after a landslip between Yadakumari and Kadagaravalli (Western Ghats section) of South Western Railway at 6.56 p.m. on Friday. A release from South Western Railway said that train No. 06568 Karwar – SMVT Bengaluru Special Express was cancelled and seven other trains had been diverted as a result.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm