ಬ್ರೇಕಿಂಗ್ ನ್ಯೂಸ್
27-07-24 10:05 pm Mangalore Correspondent ಕರಾವಳಿ
ಉಳ್ಳಾಲ, ಜು.27: ನರಿಂಗಾನ ಗ್ರಾಮದ ತೌಡುಗೋಳಿ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿಯಲ್ಲಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕುಪುಲು ಪಕ್ಷಿ ಸಾವಿಗೀಡಾಗಿದ್ದು ಗ್ರಾಮಸ್ಥರಲ್ಲಿ ಸಂಶಯದ ಜೊತೆಗೆ ಆತಂಕ ಮನೆಮಾಡಿದೆ.
ಪಕ್ಷಿಗಳು ಸಾವಿಗೀಡಾಗಿರುವ ಸ್ಥಳದಲ್ಲಿ ಇತ್ತೀಚೆಗಷ್ಟೇ ಮೊಬೈಲ್ ಟವರ್ ನಿರ್ಮಿಸಲಾಗಿದೆ. ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು ಪ್ರಾಣಿ ಸಂಕುಲ, ತೆಂಗಿನ ಮರಗಳಿಗೆ ಟವರ್ ನಿಂದ ಯಾವುದೇ ರೀತಿಯ ಸಮಸ್ಯೆ ಬಾರದೆಂದು ತಿಳಿಸಿದ್ದರಿಂದ ಟವರ್ ನಿರ್ಮಾಣಕ್ಕೆ ನರಿಂಗಾನ ಪಂಚಾಯತ್ ಅನುಮತಿ ನೀಡಿತ್ತು. ಇದೀಗ ಟವರ್ ಕೆಳ ಭಾಗದಲ್ಲೇ ವನ್ಯ ಪಕ್ಷಿಗಳು ನಿಗೂಢವಾಗಿ ಸತ್ತು ಬಿದ್ದಿವೆ.


ತೌಡುಗೋಳಿಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಇತ್ತೀಚೆಗೆ ಬಾಲಕನೊಬ್ಬನ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾದಾಗ ಆಟೋ ಚಾಲಕರು ನಾಯಿಗಳನ್ನ ಓಡಿಸಿ ಬಾಲಕನನ್ನ ರಕ್ಷಿಸಿದ್ದರು. ಬೀದಿ ನಾಯಿಗಳನ್ನ ಕೊಲ್ಲಲು ಯಾರಾದರೂ ತಿನಿಸಲ್ಲಿ ವಿಷ ಪದಾರ್ಥ ಬೆರೆಸಿ ಇಟ್ಟಿದ್ದು ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂಶಯವೂ ಇದೆ. ಟವರ್ ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೆಟ್ಟಿಲಲ್ಲೂ ಕಾಗೆಯೊಂದು ಸತ್ತು ಬಿದ್ದಿದೆ. ಟವರ್ ನಿಂದ ಇಪ್ಪತ್ತು ಮೀಟರ್ ದೂರದಲ್ಲಿಯೂ ಹಕ್ಕಿಗಳ ಕಳೇಬರವಿದೆ.
ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತ್ ಪಿಡಿಓ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯತ್ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರು ನೀಡಿದ್ದಾರೆ.
ಹಕ್ಕಿಗಳು ಹೇಗೆ ಸಾವನ್ನಪ್ಪಿವೆ ಎಂಬುದನ್ನು ಖಚಿತಪಡಿಸಲು ಅದರ ಕಳೇಬರಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ತಿಳಿಸಿದ್ದಾರೆ.
Mangalore Naringana birds found dead near new mobile tower, residents in fear.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:28 pm
HK News Staffer
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm