ಬ್ರೇಕಿಂಗ್ ನ್ಯೂಸ್
27-07-24 10:05 pm Mangalore Correspondent ಕರಾವಳಿ
ಉಳ್ಳಾಲ, ಜು.27: ನರಿಂಗಾನ ಗ್ರಾಮದ ತೌಡುಗೋಳಿ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿಯಲ್ಲಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕುಪುಲು ಪಕ್ಷಿ ಸಾವಿಗೀಡಾಗಿದ್ದು ಗ್ರಾಮಸ್ಥರಲ್ಲಿ ಸಂಶಯದ ಜೊತೆಗೆ ಆತಂಕ ಮನೆಮಾಡಿದೆ.
ಪಕ್ಷಿಗಳು ಸಾವಿಗೀಡಾಗಿರುವ ಸ್ಥಳದಲ್ಲಿ ಇತ್ತೀಚೆಗಷ್ಟೇ ಮೊಬೈಲ್ ಟವರ್ ನಿರ್ಮಿಸಲಾಗಿದೆ. ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು ಪ್ರಾಣಿ ಸಂಕುಲ, ತೆಂಗಿನ ಮರಗಳಿಗೆ ಟವರ್ ನಿಂದ ಯಾವುದೇ ರೀತಿಯ ಸಮಸ್ಯೆ ಬಾರದೆಂದು ತಿಳಿಸಿದ್ದರಿಂದ ಟವರ್ ನಿರ್ಮಾಣಕ್ಕೆ ನರಿಂಗಾನ ಪಂಚಾಯತ್ ಅನುಮತಿ ನೀಡಿತ್ತು. ಇದೀಗ ಟವರ್ ಕೆಳ ಭಾಗದಲ್ಲೇ ವನ್ಯ ಪಕ್ಷಿಗಳು ನಿಗೂಢವಾಗಿ ಸತ್ತು ಬಿದ್ದಿವೆ.


ತೌಡುಗೋಳಿಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಇತ್ತೀಚೆಗೆ ಬಾಲಕನೊಬ್ಬನ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾದಾಗ ಆಟೋ ಚಾಲಕರು ನಾಯಿಗಳನ್ನ ಓಡಿಸಿ ಬಾಲಕನನ್ನ ರಕ್ಷಿಸಿದ್ದರು. ಬೀದಿ ನಾಯಿಗಳನ್ನ ಕೊಲ್ಲಲು ಯಾರಾದರೂ ತಿನಿಸಲ್ಲಿ ವಿಷ ಪದಾರ್ಥ ಬೆರೆಸಿ ಇಟ್ಟಿದ್ದು ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂಶಯವೂ ಇದೆ. ಟವರ್ ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೆಟ್ಟಿಲಲ್ಲೂ ಕಾಗೆಯೊಂದು ಸತ್ತು ಬಿದ್ದಿದೆ. ಟವರ್ ನಿಂದ ಇಪ್ಪತ್ತು ಮೀಟರ್ ದೂರದಲ್ಲಿಯೂ ಹಕ್ಕಿಗಳ ಕಳೇಬರವಿದೆ.
ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತ್ ಪಿಡಿಓ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯತ್ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರು ನೀಡಿದ್ದಾರೆ.
ಹಕ್ಕಿಗಳು ಹೇಗೆ ಸಾವನ್ನಪ್ಪಿವೆ ಎಂಬುದನ್ನು ಖಚಿತಪಡಿಸಲು ಅದರ ಕಳೇಬರಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ತಿಳಿಸಿದ್ದಾರೆ.
Mangalore Naringana birds found dead near new mobile tower, residents in fear.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm