ಬ್ರೇಕಿಂಗ್ ನ್ಯೂಸ್
27-07-24 10:05 pm Mangalore Correspondent ಕರಾವಳಿ
ಉಳ್ಳಾಲ, ಜು.27: ನರಿಂಗಾನ ಗ್ರಾಮದ ತೌಡುಗೋಳಿ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿಯಲ್ಲಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕುಪುಲು ಪಕ್ಷಿ ಸಾವಿಗೀಡಾಗಿದ್ದು ಗ್ರಾಮಸ್ಥರಲ್ಲಿ ಸಂಶಯದ ಜೊತೆಗೆ ಆತಂಕ ಮನೆಮಾಡಿದೆ.
ಪಕ್ಷಿಗಳು ಸಾವಿಗೀಡಾಗಿರುವ ಸ್ಥಳದಲ್ಲಿ ಇತ್ತೀಚೆಗಷ್ಟೇ ಮೊಬೈಲ್ ಟವರ್ ನಿರ್ಮಿಸಲಾಗಿದೆ. ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು ಪ್ರಾಣಿ ಸಂಕುಲ, ತೆಂಗಿನ ಮರಗಳಿಗೆ ಟವರ್ ನಿಂದ ಯಾವುದೇ ರೀತಿಯ ಸಮಸ್ಯೆ ಬಾರದೆಂದು ತಿಳಿಸಿದ್ದರಿಂದ ಟವರ್ ನಿರ್ಮಾಣಕ್ಕೆ ನರಿಂಗಾನ ಪಂಚಾಯತ್ ಅನುಮತಿ ನೀಡಿತ್ತು. ಇದೀಗ ಟವರ್ ಕೆಳ ಭಾಗದಲ್ಲೇ ವನ್ಯ ಪಕ್ಷಿಗಳು ನಿಗೂಢವಾಗಿ ಸತ್ತು ಬಿದ್ದಿವೆ.


ತೌಡುಗೋಳಿಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಇತ್ತೀಚೆಗೆ ಬಾಲಕನೊಬ್ಬನ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾದಾಗ ಆಟೋ ಚಾಲಕರು ನಾಯಿಗಳನ್ನ ಓಡಿಸಿ ಬಾಲಕನನ್ನ ರಕ್ಷಿಸಿದ್ದರು. ಬೀದಿ ನಾಯಿಗಳನ್ನ ಕೊಲ್ಲಲು ಯಾರಾದರೂ ತಿನಿಸಲ್ಲಿ ವಿಷ ಪದಾರ್ಥ ಬೆರೆಸಿ ಇಟ್ಟಿದ್ದು ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂಶಯವೂ ಇದೆ. ಟವರ್ ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೆಟ್ಟಿಲಲ್ಲೂ ಕಾಗೆಯೊಂದು ಸತ್ತು ಬಿದ್ದಿದೆ. ಟವರ್ ನಿಂದ ಇಪ್ಪತ್ತು ಮೀಟರ್ ದೂರದಲ್ಲಿಯೂ ಹಕ್ಕಿಗಳ ಕಳೇಬರವಿದೆ.
ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತ್ ಪಿಡಿಓ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯತ್ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರು ನೀಡಿದ್ದಾರೆ.
ಹಕ್ಕಿಗಳು ಹೇಗೆ ಸಾವನ್ನಪ್ಪಿವೆ ಎಂಬುದನ್ನು ಖಚಿತಪಡಿಸಲು ಅದರ ಕಳೇಬರಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ತಿಳಿಸಿದ್ದಾರೆ.
Mangalore Naringana birds found dead near new mobile tower, residents in fear.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm