ಬ್ರೇಕಿಂಗ್ ನ್ಯೂಸ್
27-07-24 10:05 pm Mangalore Correspondent ಕರಾವಳಿ
ಉಳ್ಳಾಲ, ಜು.27: ನರಿಂಗಾನ ಗ್ರಾಮದ ತೌಡುಗೋಳಿ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿಯಲ್ಲಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕುಪುಲು ಪಕ್ಷಿ ಸಾವಿಗೀಡಾಗಿದ್ದು ಗ್ರಾಮಸ್ಥರಲ್ಲಿ ಸಂಶಯದ ಜೊತೆಗೆ ಆತಂಕ ಮನೆಮಾಡಿದೆ.
ಪಕ್ಷಿಗಳು ಸಾವಿಗೀಡಾಗಿರುವ ಸ್ಥಳದಲ್ಲಿ ಇತ್ತೀಚೆಗಷ್ಟೇ ಮೊಬೈಲ್ ಟವರ್ ನಿರ್ಮಿಸಲಾಗಿದೆ. ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು ಪ್ರಾಣಿ ಸಂಕುಲ, ತೆಂಗಿನ ಮರಗಳಿಗೆ ಟವರ್ ನಿಂದ ಯಾವುದೇ ರೀತಿಯ ಸಮಸ್ಯೆ ಬಾರದೆಂದು ತಿಳಿಸಿದ್ದರಿಂದ ಟವರ್ ನಿರ್ಮಾಣಕ್ಕೆ ನರಿಂಗಾನ ಪಂಚಾಯತ್ ಅನುಮತಿ ನೀಡಿತ್ತು. ಇದೀಗ ಟವರ್ ಕೆಳ ಭಾಗದಲ್ಲೇ ವನ್ಯ ಪಕ್ಷಿಗಳು ನಿಗೂಢವಾಗಿ ಸತ್ತು ಬಿದ್ದಿವೆ.


ತೌಡುಗೋಳಿಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಇತ್ತೀಚೆಗೆ ಬಾಲಕನೊಬ್ಬನ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾದಾಗ ಆಟೋ ಚಾಲಕರು ನಾಯಿಗಳನ್ನ ಓಡಿಸಿ ಬಾಲಕನನ್ನ ರಕ್ಷಿಸಿದ್ದರು. ಬೀದಿ ನಾಯಿಗಳನ್ನ ಕೊಲ್ಲಲು ಯಾರಾದರೂ ತಿನಿಸಲ್ಲಿ ವಿಷ ಪದಾರ್ಥ ಬೆರೆಸಿ ಇಟ್ಟಿದ್ದು ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂಶಯವೂ ಇದೆ. ಟವರ್ ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೆಟ್ಟಿಲಲ್ಲೂ ಕಾಗೆಯೊಂದು ಸತ್ತು ಬಿದ್ದಿದೆ. ಟವರ್ ನಿಂದ ಇಪ್ಪತ್ತು ಮೀಟರ್ ದೂರದಲ್ಲಿಯೂ ಹಕ್ಕಿಗಳ ಕಳೇಬರವಿದೆ.
ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತ್ ಪಿಡಿಓ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯತ್ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರು ನೀಡಿದ್ದಾರೆ.
ಹಕ್ಕಿಗಳು ಹೇಗೆ ಸಾವನ್ನಪ್ಪಿವೆ ಎಂಬುದನ್ನು ಖಚಿತಪಡಿಸಲು ಅದರ ಕಳೇಬರಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ತಿಳಿಸಿದ್ದಾರೆ.
Mangalore Naringana birds found dead near new mobile tower, residents in fear.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm