ಬ್ರೇಕಿಂಗ್ ನ್ಯೂಸ್
27-07-24 10:09 pm Mangalore Correspondent ಕರಾವಳಿ
ಮಂಗಳೂರು, ಜು.27: ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತಮ್ಮ ಸಂಕಷ್ಟ ಪರಿಹಾರಕ್ಕಾಗಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟಿನ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಸಿದ್ದು, ಪತ್ನಿ, ಮಕ್ಕಳೊಂದಿಗೆ ಕೋಲ ವೀಕ್ಷಿಸಿದರು.
ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಗ್ರ್ಯಾಂಡ್ ಸಿಟಿ ವಾಣಿಜ್ಯ ಮಳಿಗೆಯ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್ಟೆಯಲ್ಲಿ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಕೋಲ ಸೇವೆಯಲ್ಲಿ ಪಾಲ್ಗೊಂಡರು. ಸ್ಪೀಕರ್ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಆಲಿ ಅವರು ಕುಲಕರ್ಣಿ ಕುಟುಂಬಕ್ಕೆ ಸಾಥ್ ನೀಡಿ ಜತೆಯಲ್ಲೇ ಕೋಲ ವೀಕ್ಷಿಸಿದರು.




ವಿಧಾನಸಭಾ ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಮಂಗಳೂರಿನ ಕಾಂಗ್ರೆಸ್ ನ ಸ್ನೇಹಿತರು ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ ಎಂದು ವಿನಯ್ ಕುಲಕರ್ಣಿ ಇದೇ ವೇಳೆ ಮಾಧ್ಯಮಗಳಿಗೆ ಹೇಳಿದರು.
ಬಿಜೆಪಿ ಜಿ.ಪಂ ಸದಸ್ಯ ಯೋಗೇಶ ಗೌಡ ಗೌಡರ್ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯವು ಧಾರವಾಡ ಗ್ರಾಮಾಂತರ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಕುಲಕರ್ಣಿ ಭರ್ಜರಿ ಮತಗಳ ಅಂತರಗಳಿಂದ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಶಾಸಕರಾದರೂ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಈಗಲೂ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ನಡೆಯಲಿದೆ ಎಂದು ಮಾಹಿತಿ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿನಯ್ ಕುಲಕರ್ಣಿ ಅವರು ಸಂಕಷ್ಟ ನಿವಾರಣೆಗಾಗಿ ತೊಕ್ಕೊಟ್ಟಿನಲ್ಲಿ ಶನಿವಾರ ಸಂಜೆ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.
Dharwad Vinay Kulkarni performs kola along with family in Mangalore. MLA speaker UT Khader brother Iftikar alo and many others joined with Kulkarni to perform kola at Thokottu in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm