ಬ್ರೇಕಿಂಗ್ ನ್ಯೂಸ್
27-07-24 10:09 pm Mangalore Correspondent ಕರಾವಳಿ
ಮಂಗಳೂರು, ಜು.27: ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತಮ್ಮ ಸಂಕಷ್ಟ ಪರಿಹಾರಕ್ಕಾಗಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟಿನ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಸಿದ್ದು, ಪತ್ನಿ, ಮಕ್ಕಳೊಂದಿಗೆ ಕೋಲ ವೀಕ್ಷಿಸಿದರು.
ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಗ್ರ್ಯಾಂಡ್ ಸಿಟಿ ವಾಣಿಜ್ಯ ಮಳಿಗೆಯ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್ಟೆಯಲ್ಲಿ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಕೋಲ ಸೇವೆಯಲ್ಲಿ ಪಾಲ್ಗೊಂಡರು. ಸ್ಪೀಕರ್ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಆಲಿ ಅವರು ಕುಲಕರ್ಣಿ ಕುಟುಂಬಕ್ಕೆ ಸಾಥ್ ನೀಡಿ ಜತೆಯಲ್ಲೇ ಕೋಲ ವೀಕ್ಷಿಸಿದರು.




ವಿಧಾನಸಭಾ ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಮಂಗಳೂರಿನ ಕಾಂಗ್ರೆಸ್ ನ ಸ್ನೇಹಿತರು ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ ಎಂದು ವಿನಯ್ ಕುಲಕರ್ಣಿ ಇದೇ ವೇಳೆ ಮಾಧ್ಯಮಗಳಿಗೆ ಹೇಳಿದರು.
ಬಿಜೆಪಿ ಜಿ.ಪಂ ಸದಸ್ಯ ಯೋಗೇಶ ಗೌಡ ಗೌಡರ್ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯವು ಧಾರವಾಡ ಗ್ರಾಮಾಂತರ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಕುಲಕರ್ಣಿ ಭರ್ಜರಿ ಮತಗಳ ಅಂತರಗಳಿಂದ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಶಾಸಕರಾದರೂ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಈಗಲೂ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ನಡೆಯಲಿದೆ ಎಂದು ಮಾಹಿತಿ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿನಯ್ ಕುಲಕರ್ಣಿ ಅವರು ಸಂಕಷ್ಟ ನಿವಾರಣೆಗಾಗಿ ತೊಕ್ಕೊಟ್ಟಿನಲ್ಲಿ ಶನಿವಾರ ಸಂಜೆ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.
Dharwad Vinay Kulkarni performs kola along with family in Mangalore. MLA speaker UT Khader brother Iftikar alo and many others joined with Kulkarni to perform kola at Thokottu in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm